Advertisement

ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

10:49 AM Apr 19, 2019 | keerthan |

ಉಡುಪಿ: ಪವಿತ್ರ ಗುರುವಾರ ವನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು. ಧರ್ಮ ಪಾಂತದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಬಿಷಪ್‌ ರೈ| ರೆ| ಡಾ| ಜೆರಾಲ್ಡ… ಐಸಾಕ್‌ ಲೋಬೊ ನೇತೃತ್ವದಲ್ಲಿ ನಡೆಯಿತು.

Advertisement

ಧರ್ಮಾಧ್ಯಕ್ಷರು ಆರು ಪುರುಷರು, ಆರು ಮಹಿಳೆಯರು ಸಹಿತ 12 ಮಂದಿ ಪ್ರೇಷಿತರ (ವಿಶ್ವಾಸಿಗಳು) ಪಾದಗಳನ್ನು ತೊಳೆದರು. ಮೂರು ವರ್ಷಗಳಿಂದ ಪೋಪ್‌ ಫ್ರಾನ್ಸಿಸ್‌ ಅವರು ಪಾದ ತೊಳೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರ ಪಾದ ತೊಳೆಯಲು ಅವಕಾಶ ಕಲ್ಪಿಸಿ ಆದೇಶ ನೀಡಿದ್ದರು. ಈ ಬಾರಿಯೂ ಅದೇ ಸಂಪ್ರದಾಯವನ್ನು ಮುಂದುವರಿಸಿ ಪುರುಷರ ಜತೆಗೆ ಮಹಿಳೆಯರು ಸೇರಿದಂತೆ 12 ಮಂದಿಯ ಪಾದಗಳನ್ನು ಎಲ್ಲ ಚರ್ಚ್‌ಗಳಲ್ಲಿ ತೊಳೆಯಲಾಯಿತು. ಕೆಥೆಡ್ರಲ್‌ ಪ್ರಧಾನ ಧರ್ಮಗುರು ಡಾ| ಲೋರೆನ್ಸ್‌ ಡಿ’ಸೋಜಾ, ಸಹಾಯಕ ಧರ್ಮಗುರು ವಂ| ಕೆನ್ಯೂಟ್‌ ಮತ್ತು ಇತರರು ಉಪಸ್ಥಿತರಿದ್ದರು.

ಶುಭ ಶುಕ್ರವಾರ
ಯೇಸು ತನ್ನ 12 ಮಂದಿ ಶಿಷ್ಯರೊಂದಿಗೆ ಸೇರಿ ಕೊನೆಯ ಭೋಜನ ನಡೆಸಿದ್ದರು. ಈ ವೇಳೆ ಶಿಷ್ಯರ ಪಾದಗಳನ್ನು ತೊಳೆದಿದ್ದರ ಸಂಕೇತವಾಗಿ ಇದು ನಡೆಯುತ್ತಿದೆ. ಶುಕ್ರವಾರ ಯೇಸು ಸ್ವಾಮಿಯನ್ನು ಶಿಲುಬೆಗೇರಿಸಿದ್ದು ಶುಕ್ರವಾರವನ್ನುಕ್ರೆಸ್ತರು ಶುಭ ಶುಕ್ರವಾರವಾಗಿ ಆಚರಿಸಿ ಧ್ಯಾನ, ಉಪವಾಸ  ಹಾಗೂ ಯೇಸುವಿನ ಶಿಲುಬೆಯ ಹಾದಿಯನ್ನು ನೆರವೇರಿಸುವ ಮೂಲಕ ಆಚರಿಸುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next