Advertisement

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ;ಬಿಜೆಪಿ ಮುಖಂಡ ಸಾವು

09:17 AM Jun 18, 2019 | Vishnu Das |

ಕೋಲಾರ: ಬಂಗಾರಪೇಟೆಯ ಬಜಾರ್‌ ರಸ್ತೆಯಲ್ಲಿ ಶಾರ್ಟ್‌ ಸರ್‌ಕ್ಯೂಟ್‌ ಸಂಭವಿಸಿ ಮನೆಗೆ ಬೆಂಕಿ ಬಿದ್ದ ಪರಿಣಾಮ ಬಿಜೆಪಿ ಮುಖಂಡನರೊಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಸುಕಿನ ವೇಳೆ ನಡೆದಿದೆ.

Advertisement

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿರುವ ಟಿ.ಎಸ್‌.ನಾಗಪ್ರಕಾಶ್‌(58)ಅವರು ಮೃತ ದುರ್ದೈವಿ. ಮನೆಯಲ್ಲಿದ್ದ ಶೋಭಾ, ಸ್ವರೂಪ್‌ ಮತ್ತು ಸತ್ಯನಾರಾಯಣ ಅವರು ಗಾಯಗೊಂಡಿದ್ದುಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಮನೆಯಲ್ಲಿದ್ದ ಇಲೆಕ್ಟ್ರಾನಿಕ್‌ ವಸ್ತುಗಳೆಲ್ಲಾ ಸುಟ್ಟು ಭಸ್ಮವಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಂಗಾರಪೇಟೆ ಠಾಣೆಯಲ್ಲಿ ಕೇಸು ದಾಖಲಿಸಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next