Advertisement

ಮನೆ ನಿರ್ಮಾಣಕ್ಕೆ ಸಹಾಯಹಸ್ತ

07:11 AM Jun 22, 2021 | Team Udayavani |

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡತನದ ಕುಟುಂಬದ ಬಂಧುಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವ ಯೋಜನೆಯಲ್ಲಿ ಕುಕ್ಕುಂದೂರು ಮೆಲ್ಜಾಡಿ ನಿವಾಸಿಯಾದ ಫಲಾನುಭವಿ ಯಶೋದಾ ಸುರೇಶ್‌ ಶೆಟ್ಟಿ ಅವರಿಗೆ ಮಂಜೂರಾದ ಮನೆ ನಿರ್ಮಾಣಕ್ಕೆ ಸಹಾಯ ಧನದ ಕೊನೆಯ ಕಂತಿನ ಚೆಕ್‌ ಅನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ  ನೀಡಿ ಶುಭ ಕೋರಿದರು.

Advertisement

ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ್‌ ಶೆಟ್ಟಿ ಇಂದ್ರಾಳಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ, ನ್ಯಾಯವಾದಿ ಬಿ. ಮಣಿರಾಜ್‌ ಶೆಟ್ಟಿ, ಕುಕ್ಕುಂದೂರು ಬಂಟ ಸೇವಾ ಸಂಘದ ಅಧ್ಯಕ್ಷ ಭರತ್‌ ಶೆಟ್ಟಿ, ಕಾರ್ಯದರ್ಶಿ ಕೆ. ರವಿ ಶೆಟ್ಟಿ, ಕೋಶಾಧಿಕಾರಿ ಜಯಂತಿ ಶೆಟ್ಟಿ, ತೋನ್ಸೆ ವಲಯ ಬಂಟ ಸಂಘದ ಅಧ್ಯಕ್ಷ ಮನೋಹರ್‌ ಶೆಟ್ಟಿ ತೋನ್ಸೆ, ಸುರೇಶ್‌ ಶೆಟ್ಟಿ ಸೂರಿಂಜೆ, ತಾಲೂಕು ಪಂಚಾಯತ್‌ ಸದಸ್ಯ ಅಶೋಕ್‌ ಶೆಟ್ಟಿ, ಕುಕ್ಕುಂದೂರು ಸಂಘದ ಮಾಜಿ ಕಾರ್ಯದರ್ಶಿ ಅರುಣ್‌ ಕುಮಾರ್‌ ಶೆಟ್ಟಿ, ಫಲಾನುಭವಿಗಳ ಕುಟುಂಬಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next