Advertisement

ಸದ್ಯಕ್ಕೆ ಟೋಯಿಂಗ್ ನಿಲ್ಲಿಸಿದ್ದೇವೆ : ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ

07:33 PM Feb 02, 2022 | Team Udayavani |

ಬೆಂಗಳೂರು : ಸಾರ್ವಜನಿಕರ ಹೇಳಿಕೆಗಳನ್ನ ಗೌರವಿಸಲಾಗುತ್ತಿದೆ, ಅದೇ ಕಾರಣಕ್ಕೆ ಸದ್ಯಕ್ಕೆ ಟೋಯಿಂಗ್ ನಿಲ್ಲಿಸಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬುಧವಾರ ಹೇಳಿಕೆ ನೀಡಿದ್ದಾರೆ.

Advertisement

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ಸಿಎಂ ಕೂಡ ಪೋಲಿಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಒಂದು ನಿರ್ಣಯಕ್ಕೆ ಬನ್ನಿ ಅಂತಾ ಸಿಎಂ ಹೇಳಿದ್ದರು. ಈಗ ಇಲಾಖಾಧಿಕಾರಿಗಳ ಸಭೆ ನಡೆಸಿದ್ದೇನೆ. ಸಿಎಂ ಜೊತೆ ಚರ್ಚಿಸಲು ತೆರಳುತ್ತಿದ್ದೇವೆ. ಕೆಲವೇ ದಿನಗಳಲ್ಲಿ ಹೊಸ ವ್ಯವಸ್ಥೆ ತರುತ್ತೇವೆ ಎಂದರು.

ಸಿಎಂ ಜೊತೆ ಚರ್ಚಿಸಿ ಏನು ಅನ್ನೋದನ್ನ ಘೋಷಿಸಲಾಗುವುದು. ಮುಂದೆ ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಆಗಬಾರದು. ಪಾರ್ಕಿಂಗ್ ನಾಮಫಲಕಗಳು ಸಾರ್ವಜನಿಕರಿಗೆ ಸರಿಯಾಗಿ ಕಾಣಬೇಕು. ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಇದುವರೆಗೂ ಏನಾಗಿದೆಯೋ ಇನ್ನು ಮುಂದೆ ಆಗಬಾರದು. ವ್ಯವಸ್ಥೆಯನ್ನ ಸರಳೀಕರಣಗೊಳಿಸಿ ಪಾರದರ್ಶಕತೆ ತರುತ್ತೇವೆ. ಸಂಚಾರ ಪೊಲೀಸರ ನ್ಯೂನ್ಯತೆ ಬಗ್ಗೆಯೂ ಗಮನ ಹರಿಸುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next