Advertisement

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದ ಅಮಿತ್‌ ಶಾ

08:31 PM Jul 29, 2022 | Team Udayavani |

ನವದೆಹಲಿ: ಭಾರತದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಸಚಿವೆ ಸ್ಮತಿ ಇರಾನಿ ಶುಕ್ರವಾರ ಭೇಟಿಯಾಗಿದ್ದಾರೆ.

Advertisement

ಇದೊಂದು ಸೌಹಾರ್ದಯುತ ಭೇಟಿಯಾಗಿತ್ತೆಂದು ಹೇಳಲಾಗಿದೆ. ಗುರುವಾರ, ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಹಾಗೂ ಇಲಾಖೆಯ ಸಹಾಯಕ ಸಚಿವರಾಗಿರುವ ಎಸ್‌.ಪಿ.ಸಿಂಗ್‌ ಬಗೇಲ್‌ ಅವರು ರಾಷ್ಟ್ರಪತಿ ಅವರನ್ನು ಭೇಟಿಯಾಗಿದ್ದರು.

ಬುಧವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಇಲಾಖೆಯ ಸಹಾಯಕ ಸಚಿವರುಗಳಾದ ಪಂಕಜ್‌ ಚೌಧರಿ ಮತ್ತು ಡಾ.ಭಾಗವತ್‌ ಕಿಶನ್‌ರಾವ್‌ ಅವರು ರಾಷ್ಟ್ರಪತಿ ಅವರನ್ನು ಭೇಟಿಯಾಗಿದ್ದರು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next