Advertisement

ಅಪಘಾತವಾಗಿ ಬಿದ್ದಿದ್ದ ಯುವಕರಿಗೆ ಉಪಚರಿಸಿ ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ

02:45 PM Nov 13, 2021 | keerthan |

ಶಿವಮೊಗ್ಗ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಯುವಕರಿಬ್ಬರನ್ನು ಉಪಚರಿಸಿ ತಮ್ಮ ಎಸ್ಕಾರ್ಟ್ ವಾಹನದಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರುವ ಮೂಲಕ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಮಾನವೀಯತೆ ಮೆರೆದಿದ್ದಾರೆ.

Advertisement

ಶನಿವಾರ ಬೆಳಗ್ಗೆ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವ ಮಾರ್ಗಮಧ್ಯದ ಮಂಡಗದ್ದೆ ಬಳಿ ಬೈಕ್ ಅಪಘಾತವಾಗಿತ್ತು. ಬೈಕ್ ನಲ್ಲಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು. ಇದನ್ನು ಗಮನಿಸಿದ ಗೃಹ ಸಚಿವರು ತಮ್ಮ ಕಾರನ್ನು ನಿಲ್ಲಿಸಿ ಸ್ವತಃ ತಾವೇ ಗಾಯಾಳುಗಳಿಗೆ ನೀರನ್ನು ಕುಡಿಸಿ ಉಪಚರಿಸಿದ್ದಾರೆ. ಅದರಲ್ಲಿ ಓರ್ವ ಯುವಕ ಪ್ರಜ್ಞಾಹೀನನಾಗಿದ್ದು ಆತನಿಗೆ ನೀರು ಕುಡಿಸಿ ಉಪಚರಿಸಿದ್ದಾರೆ.

ಇದನ್ನೂ ಓದಿ:ಎರಡು ದಿನಗಳ ಕಾಲ ದೆಹಲಿ ಲಾಕ್ ಡೌನ್ ಮಾಡಿ; ಸುಪ್ರೀಂ ಸಿಜೆಐ ಈ ಸಲಹೆ ಕೊಟ್ಟಿದ್ದೇಕೆ?

ಬಳಿಕ ಆಂಬುಲೆನ್ಸ್ ಬರುವುದು ತಡವಾಗುತ್ತದೆಂದು ಅರಿತ ಸಚಿವರು ತಮ್ಮ ಎಸ್ಕಾರ್ಟ್ ವಾಹನದಲ್ಲೇ ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ದಾಖಲು ಮಾಡಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಇನ್ನಷ್ಟೇ ಗಾಯಾಳುಗಳ ವಿವರ ತಿಳಿದು ಬರಬೇಕಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next