Advertisement

ಹಿಂದೂ ಹೆಸರಿನಲ್ಲಿ ಓಡಾಡಿಕೊಂಡಿದ್ದ ಶಾರೀಕ್ ನನ್ನು ಟ್ರೇಸ್ ಮಾಡುವುದು ಕಷ್ಟವಾಗಿತ್ತು: ಆರಗ

01:38 PM Nov 23, 2022 | Team Udayavani |

ಮಂಗಳೂರು: ಗೋಡೆ ಬರಹ ಪ್ರಕರಣದಲ್ಲಿ ಆರೋಪಿಯಾಗಿದ್ದ ಶಾರೀಕ್ ಹಿಂದೂ ಹೆಸರಿನಲ್ಲಿ, ಐಡಿ ಮಾಡಿಕೊಂಡು ಓಡಾಡುತ್ತಿದ್ದ. ಹೀಗಾಗಿ ಅವನ ಮೇಲೆ ಅನುಮಾನ ಬಂದಿರಲಿಲ್ಲ. ಅಲ್ಲದೆ ಪದೇ ಪದೇ ಸ್ಥಳ ಬದಲಾವಣೆ ಮಾಡುತ್ತಿದ್ದ. ಹೀಗಾಗಿ ಟ್ರೇಸ್ ಮಾಡುವುದು ಕಷ್ಟವಾಗಿತ್ತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

Advertisement

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀಕ್ ಜಾಮೀನಿನ ಮೂಲಕ ಹೊರಬಂದ ಬಳಿಕ ತೀರ್ಥಹಳ್ಳಿಯ ಕೆಲವು ದಿನದವರೆಗೆ ಪೊಲೀಸ್ ಕಣ್ಣಿಟ್ಟಿದ್ದರು. ಆದರೆ ನಂತರ ತಪ್ಪಿಸಿಕೊಂಡಿದ್ದ. ಆತ ಬೇರೆ ರಾಜ್ಯಗಳಲ್ಲಿ ಸಂಚರಿಸಿದ್ದ ಎಂದರು.

ಪ್ರಕರಣದ ತನಿಖೆಯನ್ನು ಎನ್ ಐಎಗೆ ಹಸ್ತಾಂತರಿಸುವ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಣಯಯವಾಗಲಿದೆ. ಮಂಗಳೂರಿನಲ್ಲಿ ಎನ್ ಐಎ ಘಟಕ ಸ್ಥಾಪಿಸಬೇಕೆಂಬ ಬೇಡಿಕೆ ಬಗ್ಗೆ ಈಗಾಗಲೆ ಕೇಂದ್ರ ಸರಕಾರದ ಗಮನಕ್ಕೆ ತರಲಾಗಿದೆ ಎಂದರು.

ತೀರ್ಥಹಳ್ಳಿ ಟೆರರಿಸ್ಟ್ ಹಬ್ ಆಗುತ್ತಿದೆಯೇ ಎಂಬ ಪ್ರಶ್ನೆ ಉತ್ತರಿಸಿದ ಗೃಹ ಸಚಿವರು, ತೀರ್ಥಹಳ್ಳಿಯು ಸಾಹಿತಿ, ರಾಜಕಾರಣಿಗಳನ್ನು ಕೊಟ್ಟ ತಾಲೂಕು. ಕರಾವಳಿ ಕೇರಳದ ಲಿಂಕ್ ನಿಂದ ಕೆಲ ಯುವಕರು ಈ ರೀತಿ ಮಾಡುತ್ತಿದ್ದಾರಷ್ಟೇ ಎಂದರು.

ಇದನ್ನೂ ಓದಿ:ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Advertisement

ಆರೋಪಿ ಶಾರೀಕ್ ನ ಆರೋಗ್ಯ ಸುಧಾರಣೆಗೆ ಹೆಚ್ಚಿನ ಗಮನ ನೀಡುವ ಬಗ್ಗೆ ವೈದ್ಯರೊಂದಿಗೆ ಮಾತನಾಡಿದ್ದೇನೆ. ಎಂಟು ಮಂದಿ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆತ ಗುಣಮುಖನಾದ ಮೇಲೆ ಹೆಚ್ಚಿನ ವಿಚಾರಣೆ ನಡೆಯಲಿದೆ ಎಂದರು.

ಗಾಯಾಳು ರಿಕ್ಷಾ ಚಾಲಕರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರಕಾರವೇ ಭರಿಸಲಿದೆ. ಅವರ ಕುಟುಂಬಕ್ಕೆಆರ್ಥಿಕ ಸಹಾಯ ಕೂಡ ಸರಕಾರದಿಂದ ಒದಗಿಸುವ ಬಗ್ಗೆ ಬೆಂಗಳೂರಿಗೆ ತೆರಳಿದ ಮೇಲೆ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.

ಭಯಾನಕ ಘಟನೆಯೊಂದು ತಪ್ಪಿದೆ. ಭಯೋತ್ಪಾದನಾ ಕೃತ್ಯ ನಿರ್ಮೂಲನೆಗೆ ಕೇಂದ್ರ ರಾಜ್ಯ ಸರಕಾರಗಳು ಗಮನ ಹರಿಸಿದೆ. ಇತ್ತೀಚಿನ ವರ್ಷಗಳಲ್ಲಿ ಇಂತಹ ಕೃತ್ಯಗಳು ಕಡಿಮೆಯಾಗಿವೆ ಎಂದು ಗೃಹ ಸಚಿವರು ಹೇಳಿದರು.

ಶಿಘ್ರದಲ್ಲಿ ಎನ್ಐಎಗೆ

ಆರೋಪಿಗಳ ಹಣದ ಮೂಲದ ಬಗ್ಗೆ ತನಿಖೆ‌ ನಡೆಯುತ್ತಿದೆ. ಅದನ್ನು ‌ತನಿಖೆ ಮಾಡುತ್ತಿದ್ದೇವೆ. ಆದರೆ ಈಗ ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಸದ್ಯ ಆರೋಪಿಯ ಪ್ರಾಣ ಉಳಿಸಬೇಕು, ಅದು ನಮಗೆ ಅತೀ ಅಗತ್ಯ. ಅವನ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಗೆ ಬರುತ್ತದೆ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದರು.

ಎನ್ಐಎ ಮತ್ತು ಕೇಂದ್ರದ ತನಿಖಾ ಸಂಸ್ಥೆಗಳು ನಮ್ಮ ಜೊತೆ ಇದೆ. ಅಧಿಕೃತವಾಗಿ ಸದ್ಯದಲ್ಲೇ ಈ ಪ್ರಕರಣ ಎನ್ ಐಎಗೆ ಹಸ್ತಾಂತರವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಲೆಟರ್ ಕೂಡ ಕೊಡಲಾಗಿದೆ ಎಂದರು.

ತಮಿಳುನಾಡು, ಕೇರಳ ಎಲ್ಲಾ ಕಡೆಗಳಲ್ಲೂ ನಮ್ಮ ತನಿಖೆಯಾಗುತ್ತಿದೆ. ನಮ್ಮ ಪೊಲೀಸರು ಕೂಡ ಈ ಬಗ್ಗೆ ವಿಚಾರಣೆ ಮುಂದುವರೆಸ್ತಾರೆ. ನಾವು ಹಲವು ಜನರನ್ನ ವಶಕ್ಕೆ ಪಡೆಯುತ್ತೇವೆ, ಆದರೆ ಅವರು ಆರೋಪಿಗಳೇ ಆಗಿರಲ್ಲ. ಅವರನ್ನು ‌ನಾವು ಬಂಧಿಸುತ್ತಿಲ್ಲ, ವಿಚಾರಣೆಗೆ ಕರೆ ತರುತ್ತೇವೆ ಅಷ್ಟೇ. ಬೆಂಗಳೂರು ಸೇರಿ ಎಂಟು ಕಡೆ ದಾಳಿ ನಡೆಸಿ ನಾಲ್ಕು ಜನರನ್ನ ವಶಕ್ಕೆ ಪಡೆದಿದ್ದೇವೆ ಅಷ್ಟೇ. ಆರೋಪಿಗಳು ಅಂತ ಯಾರನ್ನೂ ನಾವು ವಶಕ್ಕೆ ಪಡೆದಿಲ್ಲ. ನಾವು ಎಲ್ಲಾ ರೀತಿಯಿಂದ ತನಿಖೆ ಮಾಡುತ್ತಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next