Advertisement

ಎ ಮತ್ತು ಬಿ ಕೆಟಗರಿಯಲ್ಲಿ ನೆರೆ ಪರಿಹಾರ: ಬಸವರಾಜ ಬೊಮ್ಮಾಯಿ

11:59 AM Oct 24, 2019 | Team Udayavani |

ಮಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನೆರೆ ಬಾಧಿತ ಜಿಲ್ಲೆಗಳ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ಹಿಂದೆ ನೀಡಿದ ಮಾದರಿಯಲ್ಲೇ ಪರಿಹಾರ ಸೂಚಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಅವರು ಗುರುವಾರದಂದು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸುಮಾರು 5 ಸಾವಿರ ಮನೆಗಳಿಗೆ ಹಾನಿಯಾಗಿದ್ದು,ಎ ಮತ್ತು ಬಿ ಕೆಟಗರಿಯಲ್ಲಿ ಪರಿಹಾರ ನೀಡಲಿದ್ದೇವೆ. ಪೂರ್ತಿ ಮನೆ ನಾಶವಾದ ಸಂತ್ರಸ್ತರಿಗೆ5 ಲಕ್ಷ ಪರಿಹಾರ, ಭಾಗಶಃ ಹಾನಿಯಾದವರಿಗೆ 50 ಸಾವಿರ ರೂ. ಪರಿಹಾರ ಧನ ನೀಡಲಿದ್ದೇವೆ. ರಾಜ್ಯದ 12 ಜಿಲ್ಲೆಗಳಲ್ಲಿ ಬೆಳೆ ಹಾನಿಯಾಗಿದೆ. ಎಲ್ಲರಿಗೂ ಪರಿಹಾರ ನೀಡಲಿದ್ದೇವೆ ಎಂದು ತಿಳಿಸಿದರು.

ಹುಬ್ಬಳ್ಳಿ ರೈಲು ನಿಲ್ದಾಣ ದಲ್ಲಿ ಸ್ಪೋಟ ಪ್ರಕರಣ, ಅಮರಾವತಿ ಎಕ್ಸ್ ಪ್ರೆಸ್ ನಲ್ಲಿ ಪತ್ತೆಯಾದ ನಿಂಬೆ ಹಣ್ಣಿನ ಮಾದರಿಯಲ್ಲಿ ಸ್ಪೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರ ಪೊಲೀಸ್ ಸಂಪರ್ಕ ಹೊಂದಿದ್ದೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಉಗ್ರ ಸಂಘಟನೆಗಳ ಕೈವಾಡದ ಬಗ್ಗೆ ತನಿಖೆ ನಂತರ ಗೊತ್ತಾಗಲಿದೆ ಎಂದು ಅವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next