Advertisement

ವೀಕೆಂಡ್ ಕರ್ಫ್ಯೂ: ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದ ಸಚಿವ ಬಸವರಾಜ್ ಬೊಮ್ಮಾಯಿ

04:02 PM Apr 24, 2021 | Team Udayavani |

ಬೆಂಗಳೂರು: ಕೋವಿಡ್ ಹರಡುವುದನ್ನು ತಡೆಯಲು ವೀಕೆಂಡ್ ಕರ್ಫ್ಯೂ ಮಾಡಿರುವ ಹಿನ್ನೆಲೆಯಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದರು. ವೀಕೆಂಡ್ ಕರ್ಫ್ಯೂಗಾಗಿ ಜಾರಿಗೊಳಿಸಲಾಗಿರುವ ಬಿಗಿ ಕ್ರಮಗಳನ್ನು ಪರಿಶೀಲಿಸಿದರು.

Advertisement

ಸದಾ ಜನಜಂಗುಳಿ ಇರುವ ಕೆಆರ್ ಮಾರುಕಟ್ಟೆ ಪ್ರದೇಶಕ್ಕೆ ಮೊದಲು ಭೇಟಿ ಮಾಡಿ ಅಲ್ಲಿನ ವ್ಯವಸ್ಥೆ ಗಮನಿಸಿದರು.  ಇದೇ ಸಂದರ್ಭದಲ್ಲಿ ಮಹಿಳೆಯೊಬ್ಬರು ಮಾಸ್ಕ್ ಧರಿಸದೆ ಇರುವುದನ್ನು ಗಮನಿಸಿದ ಸಚಿವರು, ಆ ಮಹಿಳೆಗೆ ಮಾಸ್ಕ್ ನೀಡಿ ಅದನ್ನು ಹಾಕಿಕೊಳ್ಳುವಂತೆ ಸಲಹೆ ನೀಡಿದರು. ಮಾಸ್ಕ್ ಬಳಕೆ ಮಾಡಿ ಕೊರೊನಾದಿಂದ ದೂರ ಇರುವಂತೆ ಬಳಕೆ ಆ ಮಹಿಳೆಗೆ ಸಚಿವರು ಮನವರಿಕೆ ಮಾಡಿಕೊಟ್ಟರು.

ಇದನ್ನೂ ಓದಿ:ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಿ: ಕುಮಾರಸ್ವಾಮಿ ಆಗ್ರಹ

ನಂತರ ಚಾಮರಾಜಪೇಟೆ, ಸೌತ್ ಎಂಡ್ ಸರ್ಕಲ್ ಮುಂತಾದ ಪ್ರದೇಶಗಳಿಗೆ ಸಚಿವ ಬೊಮ್ಮಾಯಿ ಅವರು ಭೇಟಿ ನೀಡಿ ಕರ್ಫ್ಯೂ ಬಗ್ಗೆ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್,  ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next