Advertisement

Home Minister ಡಾ| ಜಿ. ಪರಮೇಶ್ವರ ಇಂದು ಉಳ್ಳಾಲಕ್ಕೆ , ಸಚಿವ ನಾಗೇಂದ್ರ ಮಂಗಳೂರಿಗೆ

11:23 PM Jan 12, 2024 | Team Udayavani |

ಮಂಗಳೂರು: ಗೃಹ ಸಚಿವ ಡಾ| ಜಿ. ಪರಮೇಶ್ವರ ಅವರು ಜ. 13ರಂದು ಬೆಳಗ್ಗೆ 8.15ಕ್ಕೆ ಮಂಗಳೂರಿಗೆ ಆಗಮಿಸಲಿದ್ದು, 10.30ರಿಂದ ಉಳ್ಳಾಲ ತಾಲೂಕಿನ ನರಿಂಗಾನ ಕಂಬಳ್ಳೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.40ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Advertisement

ಯುವಜನ ಸೇವೆ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ ಜ. 13ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಬೆಳಗ್ಗೆ 8.15ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮನ, 10 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ಕರ್ನಾಟಕ ಮಾಸ್ಟರ್ಸ್‌ ಆ್ಯತ್ಲೆಟಿಕ್‌ ಉದ್ಘಾಟನೆ, 10.30ಕ್ಕೆ ಮಂಗಳಾ ಕ್ರೀಡಾಂಗಣ ಬಳಿ ವಸತಿ ನಿಲಯಕ್ಕೆ ಭೇಟಿ ಹಾಗೂ ಜಿಲ್ಲಾ ಕ್ರೀಡಾ ವಸತಿ ನಿಲಯದ ಕಾಮಗಾರಿ ವೀಕ್ಷಣೆ, 11.30ಕ್ಕೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ, 3.30ಕ್ಕೆ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ, ಸಂಜೆ 5ಕ್ಕೆ ನರಿಂಗಾನ ಕಂಬಳ್ಳೋತ್ಸವ ಉದ್ಘಾಟನೆ, ರಾತ್ರಿ 8.15ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next