Advertisement

Shivamogga: ಚಂದ್ರಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹ ಸಚಿವರು

04:22 PM May 30, 2024 | Team Udayavani |

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಜಿ. ಪರಮೇಶ್ವರ್ ಇಂದು ಚಂದ್ರಶೇಖರ್ ಅವರ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

Advertisement

ಶಿವಮೊಗ್ಗ ನಗರದ ವಿನೋಬನಗರದ ಕೆಂಚಪ್ಪ ಬಡಾವಣೆಯಲ್ಲಿರುವ ಚಂದ್ರಶೇಖರ್ ಅವರ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವರು ನಿಮ್ಮ ಜೊತೆ ಸರ್ಕಾರ ಇದೆ ಎಂದು ಚಂದ್ರಶೇಖರ್ ಪತ್ನಿ ಕವಿತಾ ಹಾಗೂ ಮಕ್ಕಳಿಗೆ ಭರವಸೆಯನ್ನು ನೀಡಿದರು.

ವಾಲ್ಮೀಕಿ ನಿಗಮದಲ್ಲಿನ ಭ್ರಷ್ಟಾಚಾರದ ಬಗ್ಗೆ ಡೇತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರವನ್ನು ಸಚಿವರ ಬಳಿ ಹೇಳಿಕೊಂಡು ಚಂದ್ರಶೇಖರ್ ಪತ್ನಿ ಹಾಗೂ ಮಕ್ಕಳು ಆಳಲು ತೋಡಿಕೊಂಡರು.

ಇದನ್ನೂ ಓದಿ: Jammu Kashmir: ಠಾಣೆಗೆ ನುಗ್ಗಿದ ಸೈನಿಕರು-ಪೊಲೀಸರ ಮೇಲೆ ಹಲ್ಲೆ: ದೂರು ದಾಖಲು

Advertisement

Udayavani is now on Telegram. Click here to join our channel and stay updated with the latest news.

Next