Advertisement

ಯಡಿಯೂರಪ್ಪ ತಲೆದಂಡ ಖಚಿತ : ಗೃಹ ಸಚಿವ ಎಂ.ಬಿ. ಪಾಟೀಲ್‌ 

12:00 AM Jan 17, 2019 | Team Udayavani |

 ಬೆಂಗಳೂರು: ಆಪರೇಷನ್‌ ಕಮಲ ಮಾಡಲು ಕೈ ಹಾಕಿ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಮಾನ ಮರ್ಯಾದೆ ಹರಾಜಾಗಿದ್ದು, ಆಪರೇಷನ್‌ ಹಿಂದೆ ಯಡಿಯೂರಪ್ಪ ಪಾತ್ರವಿದ್ದರೆ ಅವರ ತಲೆದಂಡವಾಗುತ್ತದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಆಪರೇಷನ್‌ ಕಮಲಕ್ಕೆ ಕೈ ಹಾಕಿ ಬಿಜೆಪಿಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಮುಖಭಂಗವಾದಂತಾಗಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಬಿಜೆಪಿಯಲ್ಲಿಯೇ ಬಂಡಾಯ ಶುರುವಾಗಲಿದೆ.ಯಡಿಯೂರಪ್ಪ ಅವರ ನಡೆಯ ಬಗ್ಗೆ ಆ ಪಕ್ಷದ ಶಾಸಕರೇ ಬಹಿರಂಗ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಸ್ವಲ್ಪ ದಿನದಲ್ಲಿ ಯಡಿಯೂರಪ್ಪ ಅವರ ತಲೆದಂಡ ವಾಗಲಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಶಾಸಕರಲ್ಲಿ ಆತಂಕವಿಲ್ಲ.ಯಾವ ಶಾಸಕರೂ ಬಿಜೆಪಿಗೆ ಹೋಗುತ್ತಿಲ್ಲ. ಮೈತ್ರಿ ಸರ್ಕಾರ ಸುಭದ್ರವಾಗಿದೆ. ರಮೇಶ್‌ ಜಾರಕಿಹೊಳಿ ಹಾಗೂ ನಾಗೇಂದ್ರ ನನ್ನ ಸ್ನೇಹಿತರು ಇಬ್ಬರೊಂದಿಗೂ ಮಾತನಾಡಿ ದ್ದೇನೆ. ಶಾಸಕಾಂಗ ಸಭೆಯಲ್ಲಿ ಎಲ್ಲರೂ ಹಾಜರಾಗಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next