Advertisement

ಗೃಹಮಂತ್ರಿ ರಾಮಲಿಂಗಾರೆಡ್ಡಿ ನಾಲಾಯಕ್‌: ಯಡಿಯೂರಪ್ಪ

06:20 AM Dec 17, 2017 | Team Udayavani |

ಗಂಗಾವತಿ: ಬಿಜೆಪಿ, ಸಂಘ ಪರಿವಾರ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಹೇಳಿ ಗೊಂದಲ ಸೃಷ್ಟಿಸಿರುವ “ರಾಜ್ಯ ಗೃಹಮಂತ್ರಿ ರಾಮಲಿಂಗಾರೆಡ್ಡಿ ನಾಲಾಯಕ್‌’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅಸಹನೆ ಹೊರಹಾಕಿದರು. 

Advertisement

ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಯಲ್ಲಿ 56 ಪ್ರಕರಣ ದಾಖಲಾಗಿದ್ದರೂ ಯಾಕೆ ಕಾನೂನು ಕ್ರಮ ಕೈಗೊಂಡಿಲ್ಲ? ರಾಜ್ಯ ಕಂಡ ಕಡು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ. ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾದ ನೀರನ್ನು ಆಂಧ್ರಪ್ರದೇಶಕ್ಕೆ ಮಾರಾಟ ಮಾಡುವ ಮೂಲಕ ರಾಯಚೂರು, ಕೊಪ್ಪಳ, ಬಳ್ಳಾರಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಸೂಕ್ತ ತನಿಖೆ ನಡೆದರೆ ಸತ್ಯ ಹೊರಬರಲಿದೆ. ರಾಜ್ಯದಲ್ಲಿ 20 ಹಿಂದುಗಳ ಹತ್ಯೆ ನಡೆದಿದ್ದರೂ ಸರ್ಕಾರ ಕೈಕಟ್ಟಿ ಕುಳಿತು ಆರೋಪಿಗಳಿಗೆ ನೆರವಾಗುತ್ತಿದೆ. ಮುಸ್ಲಿಂ ವೋಟಿಗಾಗಿ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next