Advertisement

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

08:22 PM May 29, 2023 | Team Udayavani |

ಕೊರಟಗೆರೆ: ನಾನೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ. 5 ಗ್ಯಾರಂಟಿಯ ಆರ್ಥಿಕತೆಯ ಬಗ್ಗೆ ನನಗೆ ಗೊತ್ತು. ಸರಕಾರಿ ಆದೇಶ ಮಾಡಿರೋದು ನಿಮಗೆ ಕಾಣುತ್ತಿಲ್ಲವೇ. ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಈಗಾಗಲೇ ತಾಂತ್ರಿಕ ಅನುಮೋದನೆ ನೀಡಿದ್ದೇವೆ. ಬಿಜೆಪಿ ಪಕ್ಷ ವಿನಾಕಾರಣ ಗೊಂದಲ ಸೃಷ್ಟಿಸೋ ಕೆಲಸ ಮಾಡ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಕಿಡಿಕಾರಿದರು.

Advertisement

ಕೊರಟಗೆರೆ ಪಟ್ಟಣದ ರಾಜೀವ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಕಾಂಗ್ರೆಸ್ ವಿಜಯೋತ್ಸವ ಸಮಾವೇಶದ ಬೂತ್ ಅಧ್ಯಕ್ಷರು ಮತ್ತು ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಟೀಕೆ ಮಾಡಲಿ ನಾವು ಜನಪರ ಆಡಳಿತ ನೀಡುತ್ತೇವೆ. ನಾವು ಹೇಳಿದ ಮಾತಿನ ರೀತಿ ನಡೆದುಕೊಳ್ತಿವಿ. ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ ಗ್ಯಾರಂಟಿಯನ್ನು ಜಾರಿಗೆ ತರುತ್ತೀವಿ. ಸರಕಾರ ನಡೆಸಿರುವ ಮಾಜಿ ಸಿಎಂ ಕುಮಾರಸ್ವಾಮಿಗೆ ಕ್ಯಾಬಿನೆಟ್ ತಿರ್ಮಾನದ ಬಗ್ಗೆ ಗೊತ್ತಿಲ್ಲವೇ. ಸೋಲಿನ ನೋವು ಅವರ ಮನಸ್ಥಿತಿಯನ್ನೇ ಬದಲು ಮಾಡಿದೆ. ಅವರಿಗೆ ನೇರವಾಗಿ ಮಾತನಾಡೋದಿಕ್ಕೆ ಆಗುತ್ತೀಲ್ಲ ಎಂದು ತಿಳಿಸಿದರು.

ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತದ ಅಧಿಕಾರ ನೀಡಿದೆ. ನಮ್ಮ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರಕಾರ ಜನಪರವಾದ ಆಡಳಿತ ನೀಡುತ್ತೇ. ಮತದಾರ ಪ್ರಭು ಬದಲಾವಣೆ ಬಯಸಿ ನಮಗೇ ಅಧಿಕಾರ ನೀಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಮತದಾರರ ಆರ್ಶಿವಾದದಿಂದ ಕಾಂಗ್ರೆಸ್ ಪಕ್ಷಕ್ಕೆ ಬರೋಬ್ಬರಿ 135 ಸೀಟ್ ಬಂದಿವೆ. ಕೊರಟಗೆರೆ ಕ್ಷೇತ್ರದ ಜನತೆಯು ನನಗೆ ಆರ್ಶಿವಾದ ಮಾಡಿದ್ದಾರೆ. ಕೊರಟಗೆರೆ ಕ್ಷೇತ್ರವನ್ನು ಅಭಿವೃದ್ದಿಯ ಪಥದತ್ತಾ ಕೊಂಡ್ಯೋಯುತ್ತೇನೆ ಎಂದು ಭರವಸೆ ನೀಡಿದರು.

ಹಣಕಾಸು, ಇಂಧನ, ಆಹಾರ, ಸಾರಿಗೆ ಸೇರಿದಂತೆ 5 ಇಲಾಖೆಯ ಮುಖ್ಯಸ್ಥರಿಗೆ ಪ್ರಣಾಳಿಕೆಯ ಜಾರಿಯ ವರದಿ ಸಿದ್ದತೆಗೆ ಸೂಚಿಸಲಾಗಿದೆ. ಜೂ.1 ರ ಸಿಎಂ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಅಧಿಕೃತ ತಿರ್ಮಾನ ಆಗುತ್ತೇ. ಜನರು ನೀಡಿರುವ ತಿರ್ಮಾನದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷವು ಯೋಚನೆ ಮಾಡಲಿ. ನಾವು ಕರ್ನಾಟಕ ಜನರಿಗೆ ನೀಡಿರುವ ಭರವಸೆ ಈಡೇರಿಸುವ ಕೆಲಸ ಮಾಡ್ತೇವೆ ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರಿಗೆ ತಿರುಗೇಟು ನೀಡಿದರು.

Advertisement

ಪೂರ್ವಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ದಿನೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಮಧುಗಿರಿ ಮಾಜಿ ಶಾಸಕ ಗಂಗಹನುಮಯ್ಯ, ಕೊರಟಗೆರೆ ಬ್ಲಾಕ್ ಅಧ್ಯಕ್ಷ ಅರಕೆರೆ ಶಂಕರ್, ಯುವಾಧ್ಯಕ್ಷ ವಿನಯ್, ಮಹಿಳಾಧ್ಯಕ್ಷೆ ಜಯಮ್ಮ, ಮುಖಂಡರಾದ ವಾಲೇಚಂದ್ರಯ್ಯ, ಕೇಶವಮೂರ್ತಿ, ಓಬಳರಾಜು, ಬೈರಪ್ಪ, ಕಾಮರಾಜು ಪ್ರಸನ್ನಕುಮಾರ್, ಹನುಮಾನ್, ಕವಿತಾ, ಎ.ಡಿ.ಬಲರಾಮಯ್ಯ, ಮೈಲಾರಪ್ಪ, ಜಯರಾಮು, ಚಂದ್ರಶೇಖರ್, ವೆಂಕಟಪ್ಪ, ವೆಂಕಟಬಾಬು, ಮೀನುಮಂಜಣ್ಣ ಸೇರಿದಂತೆ ಬೂತ್ ಅಧ್ಯಕ್ಷರು ಮತ್ತು ಕಾರ್ಯಕರ್ತರು ಇದ್ದರು.

ಸ್ವಾಮೀಗಳ ಆರ್ಶಿವಾದ ಪಡೆದ ಗೃಹ ಸಚಿವ..

ಗೃಹ ಸಚಿವ ಡಾ.ಜಿ.ಪರಮೇಶ್ವರ ಸೋಮವಾರ ಸಂಜೆ ಎಲೆರಾಂಪುರ ಶ್ರೀನರಸಿಂಹಗಿರಿ ಶ್ರೀಕ್ಷೇತ್ರದ ಪೀಠಾಧ್ಯಕ್ಷರಾದ ಡಾ.ಹನುಮಂತನಾಥ ಸ್ವಾಮೀಜಿಯವರ ಆರ್ಶಿವಾದ ಪಡೆದರು. ಇದೇ ಸಂದರ್ಭದಲ್ಲಿ ಎಲೆರಾಂಪರ ಶ್ರೀಮಠದ ಧಾರ್ಮಿಕ ಮತ್ತು ಶೈಕ್ಷಣಿಕ ಅಭಿವೃದ್ದಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಸ್ವಾಮೀಜಿಗಳಿಗೆ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next