Advertisement

ಇಂದು ಗೃಹ ಸಚಿವರ ದ.ಕ. ಭೇಟಿ

11:50 PM Oct 23, 2019 | Team Udayavani |

ಬಂಟ್ವಾಳ/ ಮಂಗಳೂರು: ರಾಜ್ಯ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ಅ. 24ರಂದು ದ.ಕ. ಜಿಲ್ಲಾ ಪ್ರವಾಸ ನಡೆಸಲಿದ್ದು, ಬೆಳಗ್ಗೆ 8.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

Advertisement

10 ಗಂಟೆಗೆ ಬಂಟ್ವಾಳ ನಿರೀಕ್ಷಣ ಮಂದಿರ(ಐಬಿ)ದಲ್ಲಿ ಪಶ್ಚಿಮ ವಲಯ ಮತ್ತು ಮಂಗಳೂರಿನ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಧ್ಯಾಹ್ನ 1ಕ್ಕೆ ಬೆಳ್ತಂಗಡಿಯ ಚಾರ್ಮಾಡಿ ಗ್ರಾಮದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ 4ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ 8.40 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next