Advertisement

ಕೋಟ ಕೊರಗ ಕಾಲೋನಿಗೆ ಗೃಹ ಸಚಿವರ ಭೇಟಿ; ಸಿಒಡಿ ತನಿಖೆಗೆ ಆದೇಶ

06:27 PM Jan 01, 2022 | Team Udayavani |

ಕೋಟ : ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್ ಲಾಠಿ ಚಾರ್ಜ್ ನಡೆದ ಕೋಟ ತಟ್ಟು ಕೊರಗ ಕಾಲೋನಿಗೆ ಗೃಹ ಸಚಿವ ಅರಗ ಜಾನೇಂದ್ರ ಅವರು ಶನಿವಾರ ಭೇಟಿ ನೀಡಿದರು. ಸ್ಥಳೀಯರಾದ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗೃಹ ಸಚಿವರ ಜೊತೆಗಿದ್ದರು.

Advertisement

ಪ್ರಕರಣವನ್ನು ಸಿಒಡಿ ತನಿಖೆಗೆ ನೀಡಿ ಆದೇಶ ಹೊರಡಿಸಿದರು. ಸಂತ್ರಸ್ತರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿ ಕೊರಗ ಕುಟುಂಗಳಿಗೆ ರಕ್ಷಣೆಯ ಅಭಯ ನೀಡಿದರು. ನೂತನ ವಧು-ವರರಿಗೆ ಹಾರ ಮತ್ತು ಉಡುಗೊರೆಗಳನ್ನು ನೀಡಿ ಹರಸಲಾಯಿತು.

ಮನೆಯವರ ವಿರುದ್ಧ ದಾಖಲಾದ ಪೊಲೀಸ್ ಮೇಲಿನ ಹಲ್ಲೆ ಕೇಸ್ ಸರಕಾರದ ಮೂಲಕ ವಾಪಸ್ ಪಡೆಯಲು ಕ್ರಮ ಜರುಗಿಸುವುದಾಗಿ ಭರವಸೆ ನೀಡಲಾಗಿದೆ. ಪೊಲೀಸರ ವಿರುದ್ಧದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ನಂತರ 1 ಲಕ್ಷ ರೂ. ಮತ್ತು ಹಲ್ಲೆ ಮಾಡಿದ ಆರೋಪದ ಮೇಲೆ ಉಳಿದ 50,000 ರೂ. ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್ಐ ಸಂತೋಷ್ ಬಿ.ಪಿ‌ ಅವರನ್ನು ಸಸ್ಪೆಂಡ್ ಮಾಡಲಾಗಿದ್ದು, ಉಳಿದ ಐದು ಸಿಬ್ಬಂದಿಗಳನ್ನು ಜಿಲ್ಲೆಯ ಬೇರೆ ಠಾಣೆಗಳಿಗೆ ವರ್ಗಾವಣೆಗೊಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next