Advertisement

ಸಾಲಿಗ್ರಾಮ ಗುರುನರಸಿಂಹ ದೇಗುಲಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

02:00 PM Apr 24, 2022 | Team Udayavani |

ಕೋಟ: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎ. 23ರಂದು ಸಾಲಿಗ್ರಾಮ ಗುರುನರಸಿಂಹ ಹಾಗೂ ಆಂಜನೇಯ ದೇಗುಲಕ್ಕೆ ಭೇಟಿ ನೀಡಿದರು.

Advertisement

ಈ ಸಂದರ್ಭ ದೇಗುಲದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಸ್ವಾಗತಿಸಲಾಯಿತು. ಅನಂತರ ಗೃಹ ಸಚಿವರು ಗುರುನರಸಿಂಹ, ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿ ದೇಗುಲದ ವಿಶೇಷತೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಗುರುನರಸಿಂಹ ದೇಗುಲದ ಆಡಳಿತ ಮಂಡಳಿ ಸದಸ್ಯ ಅನಂತ ಪದ್ಮನಾಭ ಐತಾಳ, ಸಾಲಿಗ್ರಾಮ ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ, ಉಪಾಧ್ಯಕ್ಷೆ ಅನಸೂಯಾ ಹೇಳ್ರೆ, ಪ.ಪಂ. ಸದಸ್ಯ ರಾಜು ಪೂಜಾರಿ ಕಾರ್ಕಡ, ಸಂಜೀವ ದೇವಾಡಿಗ, ದೇವೇಂದ್ರ ದೇವಾಡಿಗ, ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ್‌ ಅಂಕದಕಟ್ಟೆ, ಸಾಲಿಗ್ರಾಮ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯೇಂದ್ರ ಪೂಜಾರಿ, ಕುಂದಾಪುರ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸತೀಶ್‌ ಬಾರಿಕೆರೆ, ಹಿಂದೂ ಜಾಗರಣ ವೇದಿಕೆ ಕೋಟ ಗೌರವಾಧ್ಯಕ್ಷ ಸುರೇಶ್‌ ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ್‌ ನೇತೃತ್ವದಲ್ಲಿ ಪೊಲೀಸ್‌ ಸಿಬಂದಿ ಕಾನೂನು ಸುವ್ಯವಸ್ಥೆ ಕುರಿತು ನಿಗಾ ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next