Advertisement

ಸಂತ್ರಸ್ತರಿಗೆ ಮನೆ ಹಸ್ತಾಂತರ: ಸಚಿವ ಸೋಮಣ್ಣ ಭರವಸೆ

12:16 AM Oct 19, 2019 | Team Udayavani |

ಮಡಿಕೇರಿ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಕ್ಟೋಬರ್‌ 25 ಅಥವಾ ನವೆಂಬರ್‌ 3ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಹಾನಿ ಸಂತ್ರಸ್ತರಿಗೆ ನೂತನ ಮನೆಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ‌ ವಿ. ಸೋಮಣ್ಣ ತಿಳಿಸಿದ್ದಾರೆ.

Advertisement

ಕೊಡಗಿನ ವಿವಿಧೆಡೆ ಸಂಭವಿಸಿದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲಿಸಿದ ಅನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಮುಖ್ಯಮಂತ್ರಿ ಅವರು ರಾಜ್ಯಾದ್ಯಂತ ಪ್ರವಾಸ
ಕೈಗೊಂಡು, ಅತಿವೃಷ್ಟಿ ಪ್ರದೇಶ ಗಳಿಗೆ ಭೇಟಿ ನೀಡಿ ಪರಿಹಾರ ವಿತರಿಸಲು ಕ್ರಮ ಕೈಗೊಂಡಿದ್ದಾರೆ. ಇನ್ನೂ ಎಂಟು ಹತ್ತು ದಿನದಲ್ಲಿ ಬೆಳೆ ಪರಿಹಾರ ವಿತರಿಸಲಾಗುವುದು. ಈಗಾಗಲೇ 10 ಸಾವಿರ ಮತ್ತು 25 ಸಾವಿರ ರೂ. ಪರಿಹಾರ ವಿತರಿಸಲಾಗಿದೆ. ಇದುವರೆಗೆ 4.60 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಪರಿಹಾರ ಹಸ್ತಾಂತರ
ವಿ. ಸೋಮಣ್ಣ ಶುಕ್ರವಾರ ತೋರ ಗ್ರಾಮಕ್ಕೆ ಭೇಟಿ ನೀಡಿ ಭೂ ಕುಸಿತದಿಂದ ತಾಯಿ, ಪತ್ನಿ, ಎರಡು ಹೆಣ್ಣು ಮಕ್ಕಳನ್ನು ಕಳೆದುಕೊಂಡ ಪ್ರಭು ಅವರಿಗೆ ಸಾಂತ್ವನ ಹೇಳಿ ತಲಾ 4 ಲಕ್ಷ ರೂ.ಗಳ ಮೂರು ಚೆಕ್‌ ಹಸ್ತಾಂತರಿಸಿದರು. ಸಂತ್ರಸ್ತ‌ರಲ್ಲಿ ಧೈರ್ಯ ತುಂಬಬಹುದು. ಆದರೆ ಕುಟುಂಬದವರನ್ನು ಕರೆ ತರಲು ಸಾಧ್ಯವೇ ಎಂದು ಸಚಿವರು ನೋವಿನಿಂದ ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next