Advertisement

ಉಡುಪಿ: ಮನೆಯ ಬಾಗಿಲು ಮುರಿದು ಸೊತ್ತು ಕಳವು

08:01 PM Sep 10, 2022 | Team Udayavani |

ಉಡುಪಿ: ಮನೆಯೊಂದರ ಮುಖ್ಯದ್ವಾರದ ಬಾಗಿಲು ಮರಿದು ಒಳಪ್ರವೇಶಿಸಿ ಬೆಳ್ಳಿ ಹಾಗೂ ನಗದು ದೋಚಿದ ಘಟನೆ ಉಡುಪಿಯಲ್ಲಿ ನಡೆದಿದೆ.

Advertisement

ಸೆ. 9ರ ರಾತ್ರಿಯಿಂದ ಮುಂಜಾನೆ ವೇಳೆ ಈ ಕಳ್ಳತನ ನಡೆದಿದೆ. ಕುಂಜಿಬೆಟ್ಟುವಿನ ವೈಷ್ಣವಿ ಮಡಿ ಅವರು ತಂದೆ-ತಾಯಿ ಕುಟುಂಬಸ್ಥರೊಂದಿಗೆ ನೇಪಾಳ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭ ಕಳ್ಳರು ಬಾಗಿಲನ್ನು ಆಯುಧದಿಂದ ಮುರಿದು ಒಳಪ್ರವೇಶಿಸಿ ದೇವರ ಕೋಣೆಯಲ್ಲಿದ್ದ 500 ಗ್ರಾಂ ತೂಕದ ಬೆಳ್ಳಿಯ ದೇವರ ಪೀಠ, 50 ಗ್ರಾಂ ತೂಕದ ಬೆಳ್ಳಿಯ ಸಣ್ಣ ತಟ್ಟೆ, 150 ಗ್ರಾಂ ತೂಕದ ಬೆಳ್ಳಿಯ ಅರಶಿನ ಕುಂಕುಮ ಬೌಲ್, 20 ಗ್ರಾಂ ತೂಕದ ಬೆಳ್ಳಿಯ ಸಣ್ಣ ಕುಂಕುಮ ಕರಡಿಗೆ, 25 ಗ್ರಾಂ ತೂಕದ ಬೆಳ್ಳಿಯ ಗಣಪತಿಯ ಪೀಠ ಸೇರಿ ಒಟ್ಟು 845 ಗ್ರಾಂ ತೂಕದ ಬೆಳ್ಳಿ ಸಾಮಗ್ರಿಗಳು ಮತ್ತು ಸಿಸಿ ಟಿವಿ ಡಿವಿಆರ್‌, ವೈ -ಫೈ ರೂಟರ್‌ ಅನ್ನು ಕಳವು ಮಾಡಿದ್ದಾರೆ. ‌

ಕಳವಾದ ಸೊತ್ತುಗಳ ಅಂದಾಜು ಮೌಲ್ಯ 64,000 ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next