Advertisement

3.79 ಲಕ್ಷ ವಲಸೆ ಕಾರ್ಮಿಕರು ತವರಿಗೆ

06:33 AM Jun 19, 2020 | Lakshmi GovindaRaj |

ಬೆಂಗಳೂರು: ಕೋವಿಡ್‌ 19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನೀತಿಯಂತೆ ಈವರೆಗೆ 267 ಶ್ರಮಿಕ್‌ ವಿಶೇಷ ರೈಲುಗಳ ಮೂಲಕ ಹೊರ ರಾಜ್ಯದ 3.79 ಲಕ್ಷ ವಲಸೆ ಕಾರ್ಮಿಕರನ್ನು ಅವರ ತವರು ರಾಜ್ಯಗಳಿಗೆ ಕಳಿಸಿಕೊಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

Advertisement

ಈ ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಗುರುವಾರ ರಾಜ್ಯ  ಸರ್ಕಾರ ಸಲ್ಲಿರುವ ಲಿಖೀತ ಹೇಳಿಕೆಯಲ್ಲಿ ಈ ಮಾಹಿತಿ ನೀಡಲಾಗಿದೆ. ಹೊರ ರಾಜ್ಯದ ವಲಸೆ ಕಾರ್ಮಿಕರನ್ನು ಅವರ ತವರು ರಾಜ್ಯಗಳಿಗೆ ಕಳಿಸಿಕೊಡಲು ರಾಜ್ಯ ಸರ್ಕಾರ ಯೋಜನಾಬದ್ಧ ವ್ಯವಸ್ಥೆ ಮಾಡಿದೆ.

ತನ್ನ ಸ್ವಂತ ಊರಿಗೆ ತೆರಳ  ಬಯಸುವ ಪ್ರತಿಯೊಬ್ಬ ವಲಸೆ ಕಾರ್ಮಿಕರಿಗೆ ಅವರ ತವರು ರಾಜ್ಯಕ್ಕೆ ಸುರಕ್ಷಿತವಾಗಿ ಕಳಿಸಿಕೊಡುವ ಜವಾ ಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ಆದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಈವರೆಗೆ (ಜೂ.16) ರಾಜ್ಯದ ವಿವಿಧ ಜಿಲ್ಲೆಗಳಿಂದ 267  ಶ್ರಮಿಕ್‌ ವಿಶೇಷ ರೈಲುಗಳ ಮೂಲಕ 3, 79, 195 ವಲಸೆ ಕಾರ್ಮಿಕರನ್ನು ಕಳಿಸಿಕೊಡಲಾಗಿದೆ.

ಅದೇ ರೀತಿ ಜೂ.16ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸ್ಸಾಂ, ತ್ರಿಪುರಾ, ನಾಗಲ್ಯಾಂಡ್‌, ಮಣಿಪುರ ಸೇರಿದಂತೆ ಈಶಾನ್ಯ ರಾಜ್ಯಗಳಿಗೆ 23 ಶ್ರಮಿಕ್‌ ವಿಶೇಷ ರೈಲುಗಳಲ್ಲಿ 34, 815 ವಲಸೆ ಕಾರ್ಮಿಕರು ಅವರ ಸ್ವಂತ ಊರುಗಳಿಗೆ ತೆರಳಿದ್ದಾರೆ ಎಂದು ಸರ್ಕಾರ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next