Advertisement

ಗೂಂಡಾ ಕಾಯ್ದೆಯಡಿ ಜಮೀರ್‌ ಬಂಧಿಸಿ: ರೇಣು

11:49 AM Apr 26, 2020 | Naveen |

ಹೊನ್ನಾಳಿ: ಬೆಂಗಳೂರಿನ ಪಾದರಾಯನಪುರ ಘಟನೆಗೆ ಮುಖ್ಯ ಕಾರಣಕರ್ತರಾಗಿರುವ ಶಾಸಕ ಜಮೀರ್‌ ಅಹಮ್ಮದ್‌ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು.

Advertisement

ಪಟ್ಟಣ ಪಂಚಾಯತ್‌ ಆವರಣದಲ್ಲಿ ಶನಿವಾರ ಕೋವಿಡ್ ವಾರಿಯರ್ಗೆ ಊಟ ಬಡಿಸಿ ಅವರು ಮಾತನಾಡಿದರು. ಪಾದರಾಯನಪುರ ಬಡಾವಣೆಯಲ್ಲಿ ಕೋವಿಡ್ ಸೋಂಕಿತರ ಬಗ್ಗೆ ಮಾಹಿತಿ ಪಡೆಯಲು ತೆರಳಿದ್ದ ಸಿಬ್ಬಂದಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವುದು ಖಂಡನೀಯ. ಇದಕ್ಕೆ ಕಾರಣರಾದ ಜಮೀರ್‌ ಅಹಮ್ಮದ್‌ ಮೇಲೆ ತಕ್ಷಣ ಕೆಪಿಸಿಸಿ ಅಧ್ಯಕ್ಷರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಅವರ ಪತ್ನಿ ಶಾಸಕಿ ಅನಿತಾ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಅವರ ಸಹೋದರ ಸಂಸದ ಡಿ.ಕೆ. ಸುರೇಶ್‌ ಪಾದರಾಯನಪುರ ಘಟನೆಯ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಿದ್ದಕ್ಕೆ ಸರ್ಕಾರದ ವಿರುದ್ಧ ಆರೋಪ ಮಾಡಿರುವುದು ಸರಿಯಲ್ಲ. ದುರುದ್ದೇಶದಿಂದ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕರ್ನಾಟಕ ಹಾಗೂ ಕೇರಳ ಗಡಿ ಭಾಗವನ್ನು ಬಂದ್‌ ಮಾಡಬೇಡಿ ಎಂದು ಮನವಿ ಮಾಡಿದ್ದರು. ಈಗ ಅವರ ಮಗ ಕುಮಾರಸ್ವಾಮಿ ನನ್ನ ಕ್ಷೇತ್ರ ರಾಮನಗರಕ್ಕೆ
ಪಾದರಾಯನಪುರದ ಆರೋಪಿಗಳನ್ನು ಸ್ಥಳಾಂತರಿಸಿದ್ದು ತಪ್ಪು ಎಂದು ಹೇಳುತ್ತಾರೆ. ಇಂತಹ ದ್ವಂದ್ವ ಹೇಳಿಕೆಗಳನ್ನು ಕೊಡುವುದು ಎಷ್ಟು ಸರಿ, ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್‌ ರಾಮನಗರಕ್ಕಷ್ಟೇ ಸೀಮಿತರೇ ಎಂದು ಪ್ರಶ್ನಿಸಿದ ರೇಣುಕಾಚಾರ್ಯ, ವಿಪಕ್ಷ ನಾಯಕರು ಸರ್ಕಾರಕ್ಕೆ ಸಹಕಾರ ನೀಡದೆ ಅಸಹಕಾರ ನೀಡುತ್ತಿದ್ದಾರೆ ಎಂದು ದೂರಿದರು.

ಕೋವಿಡ್ ವೈರಸ್‌ ನಿಯಂತ್ರಣ ಕಾರ್ಯವನ್ನು ಕರ್ನಾಟಕ ಸರ್ಕಾರ ಉತ್ತಮವಾಗಿ ಮಾಡುತ್ತಿದೆ. ಹಾಗಾಗಿ ಆರಂಭದಲ್ಲಿ 3ನೇ ಸ್ಥಾನದಲ್ಲಿದ್ದ ಕರ್ನಾಟಕ, ಈಗ 11ನೇ ಸ್ಥಾನಕ್ಕೆ ಇಳಿದಿದೆ. ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್‌ ಕೂಡ ಮುಖ್ಯಮಂತ್ರಿಗಳನ್ನು ಪ್ರಶಂಸಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next