Advertisement

Teertharoopa Tandeyavarige..; ಸೆಟ್ಟೇರಿತು ‘ಹೊಂದಿಸಿ ಬರೆಯಿರಿ’ ನಿರ್ದೇಶಕನ ಹೊಸ ಸಿನಿಮಾ

01:24 PM Aug 18, 2024 | Team Udayavani |

“ಹೊಂದಿಸಿ ಬರೆಯಿರಿ’ ಸಿನಿಮಾ ಮೂಲಕ ಭರವಸೆ ಮೂಡಿಸಿದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಈಗ ಮತ್ತೂಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ದಿನ ಅವರ ಹೊಸ ಚಿತ್ರ ಬಂಡೆ ಮಹಾಕಾಳಿ ದೇಗುಲದಲ್ಲಿ ಸೆಟ್ಟೇರಿದೆ.

Advertisement

ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರ ಪುತ್ರಿ ಸಿನಿಮಾಗೆ ಕ್ಲ್ಯಾಪ್‌ ಮಾಡಿದರೆ, ನವೀನ್‌ ಶಂಕರ್‌ ಹಾಗೂ ಅರ್ಚನಾ ಜೋಯಿಸ್‌ ಕ್ಯಾಮೆರಾಗೆ ಚಾಲನೆ ಮಾಡಿದ್ದಾರೆ. ಜಗನ್ನಾಥ ಅವರ ಹೊಸ ಪ್ರಯತ್ನಕ್ಕೆ “ತೀರ್ಥರೂಪ ತಂದೆಯವರಿಗೆ’ ಎಂಬ ಆಕರ್ಷಕ ಟೈಟಲ್‌ ಇಡಲಾಗಿದೆ.

ತೆಲುಗಿನಲ್ಲಿ ಗುಪ್ಪೆಡಂತ ಮನಸು ಸೀರಿಯಲ್‌ ಮೂಲಕ ಕಿರುತೆರೆ ಪ್ರೇಕ್ಷಕರ ಪ್ರೀತಿ ಪಡೆದಿರುವ ನಿಹಾರ್‌ ಮುಖೇಶ್‌ ತೀರ್ಥರೂಪ ತಂದೆಯವರಿಗೆ ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈ ಚಿತ್ರ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿ ಬರುತ್ತಿದೆ. ತೆಲುಗಿನಲ್ಲಿ ಪ್ರಿಯಮೈನ ನಾನ್ನಕು ಎಂಬ ಶೀರ್ಷಿಕೆ ಇಡಲಾಗಿದೆ.

ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್‌ನಡಿ ತೀರ್ಥರೂಪ ತಂದೆಯವರಿಗೆ ಸಿನಿಮಾ ನಿರ್ಮಾಣ ವಾಗುತ್ತಿದ್ದು, ರಾಮೇನಹಳ್ಳಿ ಜಗನ್ನಾಥ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹೊಂದಿಸಿ ಬರೆಯಿರಿ ಚಿತ್ರ ನಿರ್ಮಾಣ ಮಾಡಿದ್ದ ಸಂಡೇ ಸಿನಿಮಾಸ್‌ ಈ ಸಿನಿಮಾವನ್ನು ಪ್ರಸೆಂಟ್‌ ಮಾಡುತ್ತಿದೆ. ಕೌಟುಂಬಿಕ ಹಿನ್ನೆಲೆ ಕಥೆಯುಳ್ಳ ಸಿನಿಮಾಗೆ ದೀಪಕ್‌ ಯರಗೇರಾ ಛಾಯಾಗ್ರಹಣ, ಪ್ರಶಾಂತ್‌ ರಾಜಪ್ಪ ಸಂಭಾಷಣೆ ಇರಲಿದೆ. ಸದ್ಯ ಮುಹೂರ್ತ ನೆರವೇರಿದ್ದು, ಶೀಘ್ರದಲ್ಲೇ ಶೂಟಿಂಗ್‌ ಆರಂಭವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next