Advertisement

ಅಂಕೋಲಾ: ಹೆಜ್ಜೇನು ದಾಳಿಯಿಂದ ಅಸ್ವಸ್ಥಗೊಂಡಿದ್ದ ಅಬಕಾರಿ ಇಲಾಖೆ ಮುಖ್ಯ ಪೇದೆ ಸಾವು

05:00 PM Dec 23, 2021 | Team Udayavani |

ಅಂಕೋಲಾ: ತಾಲೂಕಿನ ಅಜ್ಜಿಕಟ್ಟಾ ಬಳಿ ಹೆಜ್ಜೇನು ದಾಳಿಗೆ ಸಿಲುಕಿ ತೀವ್ರವಾಗಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಬಕಾರಿ ಇಲಾಖೆ ಮುಖ್ಯ ಪೇದೆ  ಮೃತಪಟ್ಟಿದ್ದಾರೆ.

Advertisement

ಯಲ್ಲಾಪುರ ನಿವಾಸಿ ಅಂಕೋಲಾ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಹಸನ್ ಖಾನ್ ಕರೀಂ ಖಾನ್ (45) ಮೃತ ವ್ಯಕ್ತಿ.

ಇವರು ಬುಧವಾರ ಮದ್ಯಾಹ್ನ ಉಪಹಾರ ತರಲು ಹೋಗಿದ್ದ ಸಂದರ್ಭದಲ್ಲಿ  ಭಾರಿ ಪ್ರಮಾಣದಲ್ಲಿ ಹೆಜ್ಜೇನು ಕಡಿತ ಮಾಡಿದ್ದರಿಂದ ಅವರನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ತಕ್ಷಣ ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಿಗ್ಗಿನ ಜಾವ  ಮೃತ ಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next