Advertisement

ಜೇನುತುಪ್ಪ ಉತ್ಪಾದನೆ ಹೆಚ್ಚಿಸಲು ಚಿಂತನೆ : ನಿತಿನ್‌ ಗಡ್ಕರಿ

09:45 AM Nov 29, 2019 | Team Udayavani |

ಹೊಸದಿಲ್ಲಿ : ಸಕ್ಕರೆ ಬದಲು ಜೇನುತುಪ್ಪ ಉತ್ಪಾದನೆಯನ್ನು ಪ್ರೋತ್ಸಾಹಿಸುವ ಯೋಜನೆ ಕುರಿತು ಸರಕಾರ ಚಿಂತನೆ ನಡೆಸುತ್ತಿದ್ದು, ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಉತ್ಪನ್ನಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ ಉತ್ಪನ್ನಗಳ ಮಾರಾಟಕ್ಕೆ ಸುಲಭವಾಗಲು ಭಾರತ್‌ ಕ್ರಾಫ್ಟ್ ಎಂಬ ಇ-ಕಾಮರ್ಸ್‌ ಪೋರ್ಟಲ್‌ ಅನ್ನು ಪ್ರಾರಂಭಿಸುವ ಯೋಜನೆ ಹಾಕಿಕೊಂಡಿದ್ದು, ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದೊಂದಿಗೆ ಸರಕಾರ ಮಾತುಕತೆ ನಡೆಸುತ್ತಿದೆ ಎಂದು ಅವರು ಹೇಳಿದರು.
ಇನ್ನೂ ಆರೋಗ್ಯದ ದೃಷ್ಟಿಯಿಂದಲೂ ಸಕ್ಕರೆ ಬದಲು ಜೇನುತುಪ್ಪ ಉತ್ತಮವಾಗಿದ್ದು, ಹಲವಾರು ಆಹಾರೋತ್ಪನ್ನಗಳ ತಯಾರಿಕೆಯಲ್ಲಿ ಸಕ್ಕರೆ ಬದಲು ಜೇನುತುಪ್ಪ ಬಳಸಬಹುದಾಗಿದೆ. ಇದರಿಂದ ಜೇನು ಉತ್ಪಾದನೆ ಹೆಚ್ಚಾಗುತ್ತದೆ ಮತ್ತು ಜೇನು ಉತ್ಪಾದನೆಯಲ್ಲಿ ತೊಡಗಿರುವ ಬುಡಕಟ್ಟು ಜನಾಂಗ ಮತ್ತು ಇತರರಿಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next