Advertisement
ಅವರಿಂದ ಲಕ್ಷಾಂತರ ರೂ. ನಗದು ಮತ್ತು ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ರಾಜಾಜಿನಗರ ನಿವಾಸಿ ನಿವೃತ್ತ ಪ್ರಾಂಶುಪಾಲರಾದ ಚಂದ್ರಶೇಖರ್ ಎಂಬುವವರನ್ನು ಟ್ರ್ಯಾಪ್ ಮಾಡಿದ್ದರು. ಆರೋ ಪಿಗಳು ಯಾವುದೇ ಕೆಲಸಕ್ಕೆ ಹೋಗುವುದಿಲ್ಲ. ವೃದ್ಧರು, ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಹನಿ ಟ್ರ್ಯಾಪ್ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು. ಚಂದ್ರಶೇಖರ್ ಅವರು ಬಾರ್ ಲೈಸೆನ್ಸ್ ಪಡೆ ಯಲು ಅರ್ಜಿ ಸಲ್ಲಿಸಿದ್ದರು. ಈ ವಿಚಾರ ತಿಳಿದುಕೊಂಡು ಆರೋಪಿಗಳು ಅವರನ್ನು ಟ್ರ್ಯಾಪ್ ಮಾಡಲು ಸಂಚು ರೂಪಿಸಿದ್ದರು.
Related Articles
Advertisement
ಹನಿಟ್ರ್ಯಾಪ್ ಕಿಂಗ್ಪಿನ್ ಬಂಧನ
ಅವಿವಾಹಿತರು, ವಿಧುರರು, ವೃದ್ಧರನ್ನು ಗುರಿಯಾಸಿಗಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ತಂಡದ ಕಿಂಗ್ ಪಿನ್ ಗೋವಿಂದಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿ ದ್ದಾನೆ. ಮೊಹಮ್ಮದ್(34) ಬಂಧಿತ. ಆರೋಪಿ ತನ್ನ ಸಹಚರರ ಜತೆ ಸೇರಿಕೊಂಡು ಸುಮಾರು 20 ಮಂದಿಗೆ ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಮಾಡು ತ್ತಿದ್ದರು ಎಂಬುದು ಪತ್ತೆಯಾಗಿದೆ. ನಾಪತ್ತೆಯಾಗಿರುವ ನಾಲ್ವರಿಗಾಗಿ ಹುಟುಕಾಟ ನಡೆದಿದೆ ಎಂದು ಪೊಲೀಸರು ಹೇಳಿದರು.
ಆರೋಪಿಗಳು ಮೊದಲಿಗೆ ಮಿಸ್ಡ್ ಕಾಲ್ ಕೊಡುತ್ತಿ ದ್ದರು. ನಂತರ ವಾಟ್ಸ್ಆ್ಯಪ್ನಲ್ಲಿ ಹಾಯ್ ಎಂದು ಪರಿಚಯಿಸಿಕೊಳ್ಳುತ್ತಿದ್ದರು. ಒಂದು ವೇಳೆ ಆ ಕಡೆಯಿಂದ ಕರೆ ಮಾಡಿದ ಕೂಡಲೇ ಅವರಿಗೆ ಕೆಲವೊಂದು ಆಮಿಷವೊಡ್ಡಿ ಟ್ರ್ಯಾಪ್ ಮಾಡುತ್ತಿದ್ದರು. ಆರೋಪಿ ಗಳು ಇತ್ತೀಚೆಗೆ ಮಾರತ್ತಹಳ್ಳಿ ನಿವಾಸಿ 50 ವರ್ಷದ ವ್ಯಕ್ತಿಗೆ ವಾಟ್ಸ್ಆ್ಯಪ್ನಲ್ಲಿ ಯುವತಿಯ ಹೆಸರಿನಲ್ಲಿ ಸಂದೇಶ ಕಳುಹಿಸಿದ್ದರು. ನಂತರ ಉತ್ತರ ಭಾರತದವರು ಬೆಂಗಳೂರಿಗೆ ಬಂದಾಗ ಭೇಟಿಯಾಗುತ್ತೇವೆ ಎಂದು ಹೇಳಿ ಆತ್ಮೀಯತೆ ಬೆಳೆಸಿದ್ದಾರೆ. ಅ.10ರಂದು ಅಪರಿಚಿತ ವ್ಯಕ್ತಿ ನಗರಕ್ಕೆ ಬಂದಿರುವುದಾಗಿ ತಿಳಿಸಿ, ಯುವತಿಯೊಬ್ಬಳ ಕಡೆಯಿಂದ ಕರೆ ಮಾಡಿಸಿ ಭೇಟಿ ಆಗುವುದಾಗಿ ಹೇಳುತ್ತಿದ್ದರು.
ಭೇಟಿಯಾಗಲು ದೂರುದಾರ ವ್ಯಕ್ತಿ ರಾತ್ರಿ ವೀರಣ್ಣಪಾಳ್ಯದ ಹೋಟೆಲ್ ಬಳಿ ಬಂದಿದ್ದರು. ನಂತರ ಹೋಟೆಲ್ ಒಳಗೆ ತೆರಳುತ್ತಿದ್ದಂತೆ ಯುವತಿ ಸಲುಗೆಯಿಂದ ಮಾತನಾಡಲು ಆರಂಭಿಸಿದ್ದಾಳೆ. ಈ ವೇಳೆ ಹೋಟೆಲ್ ರೂಂಗೆ ಪೊಲೀಸರು ಮತ್ತು ಮಾಧ್ಯಮದವರ ಸೋಗಿನಲ್ಲಿ ಎಂಟ್ರಿ ಕೊಟ್ಟ ಆರೋಪಿಗಳು, ನೀನು ಡ್ರಗ್ಸ್ ಮಾರಾಟ ಮಾಡುತ್ತಿದ್ದಿಯಾ? ಎಂದು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದಾರೆ. ನಂತರ ಗೂಗಲ್, ಫೋನ್ಪೇ ಮೂಲದ 5.91 ಲಕ್ಷ ರೂ. ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಬಳಿಕ ಹೋಟೆಲ್ ಕೋಣೆಯಲ್ಲಿ ಕೂಡಿ ಹಾಕಿ ಪರಾರಿಯಾಗಿದ್ದಾರೆ ಎಂದು ದೂರುದಾರರು ತಿಳಿಸಿದ್ದರು. ಈ ಸಂಬಂಧ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಸಿಕ್ಕಿ ಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದರು.