Advertisement

ಆಶಾ ಕಾರ್ಯಕರ್ತೆಯರ ಸೇವೆ ಅಮೂಲ್ಯ

03:19 PM Apr 27, 2020 | Naveen |

ಹೊನ್ನಾಳಿ: ತಮ್ಮ ವೈಯಕ್ತಿಕ ಕುಟುಂಬದ ಬದುಕನ್ನೇ ಬದಿಗಿಟ್ಟು ಕೊರೊನಾ ನಿಗ್ರಹಕ್ಕೆ ಹಗಲಿರುಳು ಆಶಾ ಕಾರ್ಯಕರ್ತೆಯರು ಗ್ರಾಮೀಣ ಹಾಗೂ ನಗರಗಳ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆರೋಗ್ಯ ಇಲಾಖೆ ಹಾಗೂ ಸಮುದಾಯದ ನಡುವೆ ಸೇತುವೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

Advertisement

ಭಾನುವಾರ ನ್ಯಾಮತಿ ತಾಲೂಕಿನ ಒಡೆಯರಹತ್ತೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕೋವಿಡ್ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಮತ್ತು ಮಧ್ಯಾಹ್ನದ ಊಟ ವಿತರಿಸಿ ಅವರು ಮಾತನಾಡಿದರು. ದೇಶಕ್ಕೆ ಬಂದೊದಗಿರುವ ಅಘಾತಕಾರಿ ಸ್ಥಿತಿಯಲ್ಲಿ ನೆಲದ ಕಾನೂನನ್ನೇ ಅರಿಯದ ಕೆಲ ದೇಶದ್ರೋಹಿಗಳು ಸಂವಿಧಾನದ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ. ಆಶಾ ಕಾರ್ಯಕರ್ತೆಯರ ಮೇಲೆ ನಿರಂತರ ಹಲ್ಲೆ, ದಬ್ಟಾಳಿಕೆ ನಡೆಸುತ್ತಿರುವುದು ಖಂಡನೀಯ ಎಂದರು.

ಮಂಡ್ಯದಲ್ಲಿ ವಿಧಾನಪರಿಷತ್‌ ಸದಸ್ಯ ಶ್ರೀಕಂಠೇಗೌಡ ಹಾಗೂ ಅವರ ಪುತ್ರ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ದೌರ್ಜನ್ಯ ಮಾಡಿರುವ ಶ್ರೀಕಂಠೇಗೌಡ, ಅವರ ಪುತ್ರ ಹಾಗೂ ಬೆಂಬಲಿಗರ ಮೇಲೆ ಸರ್ಕಾರ ಹೊಸ ಕಾನೂನಿನ ಪ್ರಕಾರ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next