Advertisement

ಶಾಸಕರು-ಜಿಲ್ಲಾಧಿಕಾರಿಯೊಂದಿಗೆ ನಿರಂತರ ಸಂಪರ್ಕ: ಸಚಿವ ಬೈರತಿ

05:28 PM Apr 23, 2020 | Naveen |

ಹೊನ್ನಾಳಿ: ನಾನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವನಾದ ದಿನದಿಂದ ಎಲ್ಲಾ ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್‌ ಹೇಳಿದರು.

Advertisement

ಪಟ್ಟಣದ ಗುರುಭವನದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹಮ್ಮಿಕೊಂಡಿದ್ದ ಆಹಾರ ಕಿಟ್‌ ವಿತರಣೆ ಹಾಗೂ ಅನ್ನ ದಾಸೋಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಲ್ಲಿ ಪ್ರವಾಸ ಮಾಡಿದ್ದೇನೆ. ಈ ಅವಳಿ ತಾಲೂಕುಗಳಲ್ಲಿ ರೇಣುಕಾಚಾರ್ಯ ಸಾಕಷ್ಟು ಜಾಗೃತಿ ಮೂಡಿಸಿದ್ದಾರೆ. ತಮ್ಮ ಸ್ವಂತ ಖರ್ಚಿನಲ್ಲಿ ಆಹಾರ ಕಿಟ್‌, ಊಟದ ವ್ಯವಸ್ಥೆ, ಔಷಧ ವಿತರಣೆ ಮಾಡಿರುವುದು ಶ್ಲಾಘನೀಯ ಎಂದರು. ಸಂಸದ ಜಿ.ಎಂ. ಸಿದ್ದೇಶ್ವರ್‌ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಯಾರಿಗೂ ಕೋವಿಡ್ ಸೋಂಕು ಇಲ್ಲ. ಆದ್ದರಿಂದ ಶೀಘ್ರದಲ್ಲಿಯೇ ನಾವು ಗ್ರೀನ್‌ ಜೋನ್‌ಗೆ ಬರಲಿದ್ದೇವೆ ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ನಾನು ಕೇವಲ ಕೋವಿಡ್ ಹಿನ್ನೆಲೆಯಲ್ಲಿ ಮಾತ್ರ ಊಟೋಪಚಾರದ ವ್ಯವಸ್ಥೆ ಮಾಡಿಲ್ಲ. ಅನ್ನ ದಾಸೋಹ ನನ್ನ ನಿತ್ಯದ ಕೆಲಸ. ಪ್ರತಿ ದಿನ ನನ್ನ ಮನೆಯಲ್ಲಿ ದಾಸೋಹ ನಡೆಯುತ್ತದೆ. ಇದು ನನ್ನ ತಾಯಿ ಹೇಳಿ ಕೊಟ್ಟ ಪಾಠ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಶಂಕರ್‌, ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ, ಎಸ್ಪಿ ಹನುಮಂತರಾಯ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next