Advertisement

ಭತ್ತ ಖರೀದಿ ಕೇಂದ್ರ ಆರಂಭ

04:49 PM May 13, 2020 | Naveen |

ಹೊನ್ನಾಳಿ: ಭತ್ತ ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎರಡು ಸಾವಿರ ರೂ. ಬೆಂಬಲ ಬೆಲೆ ನಿಗದಿಪಡಿಸಿ ಭತ್ತ ಖರೀದಿ ಕೇಂದ್ರ ಆರಂಭಿಸಿವೆ.

Advertisement

ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಲ್ಲಿ ಭತ್ತ ಖರೀದಿ ಕೇಂದ್ರ ಆರಂಭವಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮನವಿ ಮಾಡಿದರು. ಪಟ್ಟಣ ಪಂಚಾಯತ್‌ ಆವರಣದಲ್ಲಿ ಮಂಗಳವಾರ ಅಲೆಮಾರಿ ಕುಟುಂಬ, ಆಶಾ ಕಾರ್ಯಕರ್ತೆಯರು, ದಾದಿಯರು, ಪೊಲೀಸ್‌ ಇಲಾಖೆ ಸಿಬ್ಬಂದಿ, ಪೌರಕಾರ್ಮಿಕರು ಇತರರಿಗೆ ಊಟ ಬಡಿಸಿದ ನಂತರ ಅವರು ಮಾತನಾಡಿದರು.

ಅವಳಿ ತಾಲೂಕಿನಲ್ಲಿ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಈಗಾಗಲೇ ಭತ್ತ ಕಟಾವು ಆರಂಭವಾಗಿದೆ. ಕೇಂದ್ರ ಸರ್ಕಾರ 1810 ರೂ. ಹಾಗೂ ರಾಜ್ಯ ಸರ್ಕಾರ 200 ರೂ. ಬೆಂಬಲ ಬೆಲೆ ನಿಗದಿ ಮಾಡಿ ಒಟ್ಟು 2010 ರೂ.ಗಳಂತೆ ಪ್ರತಿ ಕ್ವಿಂಟಾಲ್‌ಗೆ ದರ ನಿಗದಿಪಡಿಸಿ ಭತ್ತ ಖರೀದಿ ಆರಂಭಿಸಿವೆ. ಲಾಕ್‌ಡೌನ್‌ ನಿಂದ ಸಾಕಷ್ಟು ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಇದನ್ನು ಮನಗಂಡ ಸರ್ಕಾರಗಳು ರೈತರ ಬೆನ್ನಿಗೆ ನಿಂತು ಭತ್ತಕ್ಕೆ ಬೆಂಬಲ ಬೆಲೆ ನಿಗದಿಪಡಿಸಿವೆ. ಹೊನ್ನಾಳಿ ಪಟ್ಟಣದ ದೇವನಾಯ್ಕನಹಳ್ಳಿಯಲ್ಲಿರುವ ಮಂಜುನಾಥ ರೈಸ್‌ಮಿಲ್‌ನಲ್ಲಿ ಖರೀದಿ ಕೇಂದ್ರ ಆರಂಭಿಸಲಾಗಿದೆ ಎಂದರು. ಸುಮಾ ರೇಣುಕಾಚಾರ್ಯ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next