Advertisement

ರೈತರಿಗೂ ಗೌರವ ಡಾಕ್ಟರೆಟ್‌: ಬೆಂಗಳೂರು ಕೃಷಿ ವಿವಿ ನಿರ್ಧಾರ

11:18 PM Sep 20, 2021 | Team Udayavani |

ಬೆಂಗಳೂರು: ಬೆಂಗಳೂರು ಕೃಷಿ ವಿವಿಯು ಹೊಸ ಆಲೋಚನೆಗೆ ಮುನ್ನುಡಿ ಬರೆದಿದ್ದು, ಮುಂದಿನ ವರ್ಷದಿಂದ ಸಾಧಕ ರೈತರಿಗೂ ಗೌರವ ಡಾಕ್ಟರೆಟ್‌ ನೀಡಲು ತೀರ್ಮಾನಿಸಿದೆ.

Advertisement

ಸೋಮವಾರ ಸುದ್ದಿಗೋಷ್ಠಿಯಲ್ಲಿ ಕುಲಪತಿ ಡಾ| ಎಸ್‌. ರಾಜೇಂದ್ರ ಪ್ರಸಾದ್‌ ಈ ಬಗ್ಗೆ ಮಾಹಿತಿ ನೀಡಿದರು. ಈ ವರ್ಷವೇ ರೈತರಿಗೂ ಕೃಷಿ ವಿವಿಯಿಂದ ಗೌರವ ಡಾಕ್ಟರೆಟ್‌ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ ಕೋವಿಡ್‌ ಹಿನ್ನೆಲೆಯಲ್ಲಿ ತೊಡಕಾಯಿತು. ಕೃಷಿ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರ ಮಾಡಿದ ಮಾದರಿ ರೈತರನ್ನು ಗುರುತಿಸಿ ಗೌರವಿಸುವುದು ಕೃಷಿ ವಿವಿಯ ಉದ್ದೇಶವಾಗಿದೆ. ಯಾವ ವಿವಿಯೂ ಇದುವರೆಗೆ ಇಂತಹ ನಿರ್ಧಾರ ಕೈಗೊಂಡಿರಲಿಲ್ಲ ಎಂದು ಹೇಳಿದರು.

ಕೃಷಿ ವಿವಿಯಲ್ಲಿ ಹೊಸ ಶೈಕ್ಷಣಿಕ ನೀತಿ ಜಾರಿ:

ಕೇಂದ್ರ ಸರಕಾರದ ಹೊಸ ಶೈಕ್ಷಣಿಕ ನೀತಿ ಬಗ್ಗೆ ಮಾತನಾಡಿದ ಅವರು, ಹೊಸ ಶಿಕ್ಷಣ ನೀತಿ ಜಾರಿ ಕುರಿತಂತೆ ಕೃಷಿ ವಿಶ್ವವಿದ್ಯಾನಿಲಯ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೃಷಿ ವಿವಿಯಲ್ಲಿ ಶೇ.70ರಷ್ಟು ಹೊಸ ಶೈಕ್ಷಣಿಕ ರೀತಿಯಲ್ಲೆ ಚಟುವಟಿಕೆಗಳು ನಡೆಯುತ್ತಿವೆ.ಆ ಹಿನ್ನೆಲೆಯಲ್ಲಿ ಹೊಸ ಶೈಕ್ಷಣಿಕ ನೀತಿಗೆ ಯಾವುದೇ ರೀತಿಯ ತೊಂದರೆ ಉಂಟಾಗದು ಎಂದು ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next