Advertisement
ಉತ್ತರ ಪ್ರದೇಶದ ಸಹರಣಪುರ ಮತ್ತು ಕುಶಿನಗರ ಜಿಲ್ಲೆಗಳಲ್ಲಿ ವಿಷ ಮದ್ಯ ಸೇವಿಸಿ ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ.
Related Articles
Advertisement
ವಿಷ ಮದ್ಯ ಸೇವಿಸಿ ಅಸ್ವಸ್ಥರಾಗಿರುವವರಿಗೆ ಕೂಡಲೇ ವೈದ್ಯಕೀಯ ನೆರವು ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 50,000 ರೂ. ಪರಿಹಾರವನ್ನು ಅವರು ಪ್ರಕಟಿಸಿದ್ದಾರೆ.
ವಿಷ ಮದ್ಯ ಪ್ರಕರಣಕ್ಕೆ ಕಾರಣವಾದರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುವಂತೆ ಸಿಎಂ ಆದಿತ್ಯನಾಥ್ ಅವರು ಅಬಕಾರಿ ಮುಖ್ಯ ಕಾರ್ಯದರ್ಶಿ ಮತ್ತು ಉ.ಪ್ರ. ಡಿಜಿಪಿ ಅವರಿಗೆ ಆದೇಶ ನೀಡಿದ್ದಾರೆ.