Advertisement

ಈ ರಾಶಿಯವರಿಂದು ಮಾತಿಗೆ ಮಾತು ಬೆಳೆಸದೆ ಮೌನದಿಂದ ಕಾರ್ಯ ಸಾಧಿಸಬೇಕು

07:20 AM Jun 06, 2021 | Team Udayavani |

6-6-2021

Advertisement

ಮೇಷ: ಕೆಲವು ಸಣ್ಣಪುಟ್ಟ ಗ್ರಹಗಳ ಪ್ರತಿಕೂಲತೆಯ ಪರಿಣಾಮ ನಿಮ್ಮ ವ್ಯವಹಾರಗಳು ಸರಾಗವಾಗಿ ನಡೆದರೂ ಲಾಭಾಂಶವು ನಿಮ್ಮ ಕೈಗೆ ಹತ್ತದೇ ಬೇಸರವೆನಿಸಲಿದೆ. ಅದರಿಂದ ಕುಟುಂಬದಲ್ಲಿ ಮನಸ್ತಾಪ ಕಂಡುಬಂದೀತು.

ವೃಷಭ: ಸಾಮಾಜಿಕ ಚಟುವಟಿಕೆಗಳು ನಿಮ್ಮ ಮನಸ್ಸಿಗೆ ಸಂತಸ ನೀಡಿದರೂ ಮಿಥ್ಯಾರೋಪದಿಂದ ಜಾಗರೂಕರಾಗಿರಿ. ಅವಿವಾಹಿತರಿಗೆ ಅಚ್ಚರಿಯ ವಾರ್ತೆ ತೋರಿಬರಲಿದೆ. ಪ್ರೀತಿಪಾತ್ರರ ಸಮಾಗಮದಿಂದ ಸಂತಸವಾಗಲಿದೆ.

ಮಿಥುನ: ವಾಹನ ಖರೀದಿ ಯಾ ಗೃಹ ನಿರ್ಮಾಣ, ಭೂಮಿ ಖರೀದಿದಾರರಿಗೆ ಅಧಿಕ ಧನವ್ಯಯವಾದರೂ ಸಮಾಧಾನವೆನಿಸಲಿದೆ. ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಕಂಡಬಂದು ಅಭಿವೃದ್ಧಿಯಾಗುವುದು. ಶುಭವಿದೆ.

ಕರ್ಕ: ಉದ್ಯೋಗಾಪೇಕ್ಷಿಗಳಿಗೆ ಆಕಸ್ಮಿಕ ಉದ್ಯೋಗ ದೊರೆತು ಲಾಭ ಒದಗಿ ಬರಲಿದೆ. ಹಿಂದಿನ ಕೆಲಸ ಕಾರ್ಯಗಳ ಬಗ್ಗೆ ಸಿಂಹಾವಲೋಕನ ಅಗತ್ಯವಿದೆ. ಮಹಿಳೆಯರಿಗೆ ಅನಾವಶ್ಯಕ ಋಣಾತ್ಮಕ ಚಿಂತನೆಗಳು ಕಾಡುವ ಸಂಭವವಿದೆ.

Advertisement

ಸಿಂಹ: ಪುರುಷರಿಗೆ ವ್ಯಾಪಾರ, ವ್ಯವಹಾರದಲ್ಲಿ ವಂಚನೆ ತೋರಿ ವಿಶ್ವಾಸದ ದುರುಪಯೋಗವಾಗಲಿದೆ. ಮಾತಿಗೆ ಮಾತು ಬೆಳೆಸದೆ ಮೌನದಿಂದ ಕಾರ್ಯ ಸಾಧಿಸಬೇಕು. ಯಾರೊಂದಿಗೂ ನಿಷ್ಠುರತೆ ಸಲ್ಲದು. ಶುಭವಿದೆ.

ಕನ್ಯಾ: ಸಾಂಸಾರಿಕವಾಗಿ ಸಮಾಧಾನವಿದ್ದರೂ ಹಿತಶತ್ರುಗಳ ಉಪಟಳ ಹಾಗೂ ದಾಯಾದಿಗಳು ಕಿರಿಕಿರಿ ತಂದಾರು. ಆಪ್ತ ಸ್ನೇಹಿತರ ನೆರವಿನಿಂದ ಕಾರ್ಯಾನುಕೂಲವಾಗಲಿದೆ. ಕೃಷಿಕರಿಗೆ ಮಳೆಯಿಂದ ತುಸು ನೆಮ್ಮದಿ ಕಾಣಲಿದೆ.

ತುಲಾ: ಕೂಡಿಟ್ಟ ಹಣದ ವ್ಯಯದಿಂದ ಸದುಪಯೋಗವಾಗಿ ಬಂಧು ಮಿತ್ರರಿಂದ ಪ್ರಶಂಸೆಗೆ ಒಳಗಾಗುವಿರಿ. ನಿರುದ್ಯೋಗಿಗಳು ಉದ್ಯೋಗ ಲಾಭದ ಅವಕಾಶಗಳನ್ನು ಸದುಪಯೋಗಿಸಬೇಕು. ಉದ್ಯೋಗಿಗಳಿಗೆ ನಿರಾಸೆ ತಂದೀತು.

ವೃಶ್ಚಿಕ: ಉದ್ಯೋಗಿಗಳಿಗೆ ನಿರೀಕ್ಷಿತ ರೀತಿಯಲ್ಲಿ ಕಚೇರಿ ಕೆಲಸಗಳು ಉತ್ತಮವಾಗಿ ಸಾಗುತ್ತವೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ರೀತಿಯಲ್ಲಿ ಫ‌ಲಿತಾಂಶ ದೊರಕಲಿದೆ. ನಿರುದ್ಯೋಗಿಗಳಿಗೆ ಅವರ ಇಚ್ಛೆಗೆ ಅನುಗುಣವಾಗಿ ಉದ್ಯೋಗ ಲಭಿಸಲಿದೆ.

ಧನು: ಆರೋಗ್ಯಭಾಗ್ಯವು ಸಾವಕಾಶವಾಗಿ ಸುಧಾರಿಸಿ ತೃಪ್ತಿ ಎನಿಸಲಿದೆ. ವ್ಯಾಪಾರಿಗಳಿಗೆ ತಕ್ಕಮಟ್ಟಿನ ಲಾಭ ಸಿಗಲಿದೆ. ಆಕಸ್ಮಿಕವಾಗಿ ವಿದೇಶ ಯೋಗದಿಂದ ವಿದ್ಯಾರ್ಥಿಗಳಿಗೆ ಪೂರಕವಾದ ವಾತಾವರಣದಿಂದ ನೆಮ್ಮದಿ ಇದೆ.

ಮಕರ: ಅತೀ ಮಹತ್ವದ ವಿಚಾರದಲ್ಲಿ ದುಡುಕದೆ ವಿವೇಚನಾವಂತರಾಗಿ ಎಚ್ಚರದ ಹೆಜ್ಜೆ ಇಡಬೇಕು. ಹಾಗಾದಾಗ ಮಾತ್ರ ನಿಮಗೆ ಜಯ ಸಿಗಲಿದೆ. ಬಹುದಿನಗಳಿಂದ ಕಾದು ನೆಂಟಸ್ತಿಕೆ ದೊರೆತು ಸಮಾಧಾನವಾಗುವುದು.

ಕುಂಭ: ಸಾಂಸಾರಿಕವಾಗಿ ಸ್ವಲ್ಪ ಕಿರಿಕಿರಿ ಎನಿಸಿದರೂ ಸಮಾಧಾನದಿಂದ ಸುಧಾರಿಸಿಕೊಂಡು ಹೋಗುವುದು ಒಳಿತು. ಮುಖ್ಯವಾಗಿ ಆತ್ಮವಿಶ್ವಾಸ, ಸ್ವಪ್ರಯತ್ನಬಲದಲ್ಲಿ ನಂಬಿಕೆ ಅಗತ್ಯ. ತಾಳ್ಮೆ ಅಗತ್ಯಬೇಕು.

ಮೀನ: ನಿಮಗೆ ಆಕಸ್ಮಿಕ ಧನಾಗಮನದಿಂದ ಕಾರ್ಯಸಿದ್ಧಿ ಎನಿಸಿ ಮನೆಯಲ್ಲಿ ಧಾರ್ಮಿಕ, ಶುಭಮಂಗಲ ಕಾರ್ಯಗಳಿಂದ ಮನಸ್ಸು ಉಲ್ಲಸಿತಗೊಳ್ಳಲಿದೆ. ಅವಿವಾಹಿತರಿಗೆ ಉತ್ತಮ ಸಂಬಂಧ ದೊರಕಲಿದೆ.

ಎನ್.ಎಸ್.ಭಟ್

Advertisement

Udayavani is now on Telegram. Click here to join our channel and stay updated with the latest news.

Next