Advertisement

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

07:44 AM Aug 01, 2024 | Team Udayavani |

ಮೇಷ: ಹೊಸ ಲಕ್ಷ್ಯ, ಹೊಸ ಲೆಕ್ಕಾಚಾರಗಳೊಂದಿಗೆ ಹೊಸ ವ್ಯವಹಾರಿಕ ಮಾಸ ಆರಂಭ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕೆಲಸಗಳು ಮುಕ್ತಾಯ. ಉದ್ಯಮದ ನೌಕರರ ಮನಸ್ಸಿನಲ್ಲಿ ಹೊಸ ಆಶೆಗಳು. ಮಹಿಳಾ ಸ್ವೋದ್ಯೋಗ ಯೋಜನೆ ಮುನ್ನಡೆ.

Advertisement

ವೃಷಭ: ಮಾಸಾಂತ್ಯದಲ್ಲಿದ್ದ ಪ್ರಗತಿಯ ನಿರೀಕ್ಷೆ ಮುಂದುವರಿಕೆ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಕೃಷಿ ಕ್ಷೇತ್ರದ ಪ್ರಯೋಗಗಳು ಯಶಸ್ವಿ. ಸರಕಾರಿ ಯೋಜನೆಗಳ ಸೌಲಭ್ಯದ ಆಶೆಗೆ ತಣ್ಣೀರು. ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ.

ಮಿಥುನ: ಕೇಳಿದವರಿಗೆ ಮಾತ್ರ ಸಲಹೆ ನೀಡಿ. ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ. ಉದ್ಯಮ ಅಭಿವೃದ್ಧಿಗೆ ಸಾಂಸ್ಥಿಕ ನೆರವು ಪ್ರಾಪ್ತಿ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ.

ಕರ್ಕಾಟಕ: ಶೀಘ್ರ ಉತ್ಕರ್ಷ ಹೊಂದುವ ಆಕಾಂಕ್ಷೆಗೆ ಪೋಷಣೆ. ಉದ್ಯೋಗದಲ್ಲಿ ಕ್ರಮೇಣ ಉನ್ನತಿ. ಅಕಸ್ಮಾತ್‌ ಧನಾಗಮ ಯೋಗ. ಆಪ್ತಮಿತ್ರನಿಂದ ಶುಭವಾರ್ತೆ. ಕೃಷ್ಯುತ್ಪನ್ನ ಮಾರಾಟದಿಂದ ಉತ್ತಮ ಲಾಭ. ವಿದ್ಯಾರ್ಥಿ ವೃಂದಕ್ಕೆ ಹೊಸ ಹುರುಪು.

ಸಿಂಹ: ಅಪರಿಮಿತ ಸಿದ್ಧತೆಯೊಂದಿಗೆ ರಂಗ ಪ್ರವೇಶ. ಉದ್ಯೋಗ ಕ್ಷೇತ್ರದಲ್ಲಿ ಅಗ್ರಸ್ಥಾನ. ಉದ್ಯಮಕ್ಕೆ ಸರ್ವತೋಮುಖ ಪ್ರಗತಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಕೃಷಿ ಕಾರ್ಮಿಕರಿಗೆ ಅನುಕೂಲದ ವಾತಾವರಣ.

Advertisement

ಕನ್ಯಾ: ಶಕ್ತಿ, ಸಾಮರ್ಥ್ಯಗಳ ಸಕಾಲಿಕ ಉಪ ಯೋಗ. ಸಹೋದ್ಯೋಗಿಗಳಿಂದ ಪ್ರತಿಭೆಗೆ ಗೌರವ. ಸಣ್ಣ ಉದ್ಯಮಿಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ.

ತುಲಾ: ಹಲವು ದಿನಗಳಿಂದ ಕಾಡುತ್ತಿದ್ದ ಸಂಶಯ ನಿವಾರಣೆ. ಉದ್ಯೋಗ ಸ್ಥಾನದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ಪ್ರಾಪ್ತಿ. ಗುರುಸ್ಥಾನದಲ್ಲಿರುವ ಹಿರಿಯರ ಭೇಟಿ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಹರ್ಷ. ಸಂಸಾರ ದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ವೃಶ್ಚಿಕ: ದೀರ್ಘ‌ ಕಾಲದ ಅರಸುವಿಕೆ ಮುಕ್ತಾಯ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಮುಂದು ವರಿಕೆ. ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳು ಯಶಸ್ಸಿನ ಪಥದಲ್ಲಿ.

ಧನು: ಕಠಿನ ಮಾರ್ಗದಲ್ಲಿ ಸಂಪಾದನೆ ವೃದ್ಧಿ. ಸಹೋದ್ಯೋಗಿಗಳಿಂದ ಸಂಪೂರ್ಣ ಸಹಕಾರ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಮಹಿಳೆಯರ ಉಸ್ತುವಾರಿಯ ಖಾದ್ಯಪದಾರ್ಥ ಉದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಲಾಭ.

ಮಕರ: ಸ್ಥಿರವಾದ ಹೆಜ್ಜೆಗಳನ್ನಿಟ್ಟು ಕಾರ್ಯ ದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ನಿಗದಿತ ಸಮಯಕ್ಕೆ ಕಾರ್ಯ ಮುಕ್ತಾಯ. ಉದ್ಯಮ ಉತ್ಪನ್ನಗಳ ಮಾರಾಟ ವೃದ್ಧಿ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ವರಮಾನ ವೃದ್ಧಿ.

ಕುಂಭ: ಕುಗ್ಗದ ಹುರುಪಿನೊಂದಿಗೆ ಹೊಸ ಮಾಸದ ಕಾರ್ಯಾರಂಭ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಬಹುಪಾಲು ಮುಕ್ತಾ ಯ. ಉದ್ಯಮದ ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು. ಮುದ್ರಣ ಸಾಮಗ್ರಿ, ಸ್ಟೇಶನರಿ ವಿತರಕರಿಗೆ ಹೊಸಬರ ಸಂಪರ್ಕ.

ಮೀನ: ಹೊಸ ತಿಂಗಳು ಬಂದೊಡನೆ ಇನ್ನಷ್ಟು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ. ಸರಕಾರಿ ಇಲಾಖೆಗಳವರಿಂದ ಸಹಕಾರ. ಉಪಕೃತ ಸಾರ್ವಜನಿಕರಿಂದ ಪ್ರಶಂಸೆ. ಕೃಷಿಕರ ಅನುಕೂಲಕ್ಕೆ ಹೊಸ ಕ್ರಮಗಳು.

Advertisement

Udayavani is now on Telegram. Click here to join our channel and stay updated with the latest news.

Next