Advertisement

Daily Horoscope:ಅನಿರೀಕ್ಷಿತ ಧನಾಗಮ,ಸರಕಾರಿ ಅಧಿಕಾರಿಗಳಿಗೆ ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ

07:33 AM Aug 09, 2024 | Team Udayavani |

ಮೇಷ: ಈ ದಿನ ಶುಭಫಲಗಳೇ ಅಧಿಕ. ಉದ್ಯೋಗದಲ್ಲಿ ಅಪೂರ್ವ ಸಾಧನೆ ಮಾಡಿದ ಕೀರ್ತಿ ನಿಮ್ಮದಾಗಲಿದೆ. ಉದ್ಯೋಗ ಬದಲಾ ವಣೆಯ ಯೋಚನೆ ಬೇಡ. ಉದ್ಯಮದಲ್ಲಿ ನೌಕರರ ಸಮಸ್ಯೆಯಿದ್ದರೂ ಉತ್ಪಾದನೆಗೆ ಕೊರತೆಯಾಗದು.

Advertisement

ವೃಷಭ: ಯೋಚಿಸಿ, ವಿಮರ್ಶಿಸಿ ಮುನ್ನಡೆಯಿರಿ. ಉದ್ಯೋಗದಲ್ಲಿ ತೃಪ್ತಿ ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಮುಕ್ತಾಯಗೊಳಿಸಿ ಇನ್ನೊಂದಕ್ಕೆ ಕೈಹಾಕಿ. ವಿತ್ತಸಂಸ್ಥೆಯಿಂದ ಧನಸಹಾಯ ಸಕಾಲಕ್ಕೆ ಲಭ್ಯ. ವ್ಯವಹಾರ ನಿಮಿತ್ತ ಸಣ್ಣ ಪ್ರವಾಸದ ಸಾಧ್ಯತೆ.

ಮಿಥುನ: ಉದ್ಯೋಗದಲ್ಲಿ ಸಾಮಾನ್ಯ ಸ್ಥಿತಿ. ಸೇವಾ ಹಿರಿತನಕ್ಕೆ ಮಾನ್ಯತೆ. ಸ್ವಂತ ಉದ್ಯಮ ಆರ್ಥಿಕ ಮುಗ್ಗಟ್ಟು ಪರಿಹಾರಕ್ಕೆ ವಿತ್ತಸಂಸ್ಥೆ ನೆರವು. ಮಹಿಳೆಯರ ಸ್ವಾವಲಂಬನೆ ಸಾಧನೆ ಪ್ರಗತಿಯಲ್ಲಿ.ದೇವತಾ ಸನ್ನಿಧಿಗೆ ಭೇಟಿ.

ಕರ್ಕಾಟಕ: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಕೃಷ್ಯುತ್ಪನ್ನ ಮಾರಾಟದಿಂದ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಗೋಚರ. ಹಿರಿ ಯರು, ಗೃಹಿಣಿಯರು, ಮಕ್ಕಳ ಆರೋಗ್ಯ ಉತ್ತಮ.

ಸಿಂಹ: ಅನಿರೀಕ್ಷಿತ ಧನಾಗಮ. ಸರಕಾರಿ ಅಧಿಕಾರಿಗಳಿಗೆ ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಪರವೂರಿನಲ್ಲಿರುವ ಬಂಧುಗಳ ಅನಿರೀಕ್ಷಿತ ಆಗಮನ. ಗೃಹೋತ್ಪನ್ನ ಖಾದ್ಯಪದಾರ್ಥಗಳ ಮಾರಾಟದಿಂದ ಲಾಭ.

Advertisement

ಕನ್ಯಾ: ಉದ್ಯೋಗದಲ್ಲಿ ಸ್ಥಿರವಾಗಿ ನಿಲ್ಲುವ ಪ್ರಯತ್ನ. ವಿದ್ಯುತ್‌ ಮತ್ತು ಎಲೆಕ್ಟ್ರಾನಿಕ್ಸ್‌ ಉಪಕರಣ ವ್ಯಾಪಾರಿಗಳಿಗೆ ಉತ್ತಮ ಆದಾಯ. ವಿವಾಹಾಸಕ್ತರಿಗೆ ಒಳ್ಳೆಯ ಸಂಬಂಧ ಕೂಡಿ ಬರುವ ಸಾಧ್ಯತೆ. ಗೃಹೋತ್ಪನ್ನಗಳಿಗೆ ಬೇಡಿಕೆ ವೃದ್ಧಿ.

ತುಲಾ: ಅಳುಕದೆ ಮುಂದುವರಿಯಿರಿ. ಉದ್ಯೋಗದಲ್ಲಿ ಒಳ್ಳೆಯ ಹೆಸರು ಗಳಿಸುವ ಸಾಧ್ಯತೆ. ನೌಕರ ವರ್ಗದ ಉತ್ತಮ ಸಹಕಾರ. ದೈವಾನುಗ್ರಹ ಪ್ರಾಪ್ತಿಗೆ ಸಾಧನೆ ಮುಂದುವರಿಕೆ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.

ವೃಶ್ಚಿಕ: ಉದ್ಯೋಗದಲ್ಲಿ ಉನ್ನತಿ. ಸಣ್ಣ ಪ್ರಮಾಣದ ಸ್ವಂತ ಉದ್ಯಮದ ತೃಪ್ತಿಕರ ಬೆಳವಣಿಗೆ.ಪರಿಸರ ನೈರ್ಮಲ್ಯ ರಕ್ಷಣೆಯಲ್ಲಿ ಭಾಗಿ. ದೇವಾಲಯಕ್ಕೆ ಭೇಟಿ. ಹಿರಿಯರು, ಮಹಿಳೆಯರು ಮತ್ತು ಮಕ್ಕಳಿಗೆ ಉÇÉಾಸದ ವಾತಾವರಣ.

ಧನು: ಹಿತಶತ್ರುಗಳ ಬಾಧೆಯಿಂದ ಬಿಡುಗಡೆ. ಉದ್ಯೋಗ ಸ್ಥಾನದಲ್ಲಿ ಪರಿಶ್ರಮಕ್ಕೆ ಗೌರವ. ಸ್ವಂತ ಉದ್ಯಮ ಕ್ರಮವಾಗಿ ಅಭಿವೃದ್ಧಿ. ದೇವತಾರ್ಚನೆಯಿಂದ ನೆಮ್ಮದಿ ಪ್ರಾಪ್ತಿ.ಕೃಷಿ ಕಾರ್ಯದಲ್ಲಿ ಪಾಲುಗೊಳ್ಳುವ ಪ್ರಯತ್ನದಲ್ಲಿ ಮುನ್ನಡೆ.

ಮಕರ: ಸಮಸ್ಯೆಗಳಿಗೆ ತಾತ್ಕಾಲಿಕ ವಿರಾಮ. ಉದ್ಯೋಗ ಕ್ಷೇತ್ರದ ಒತ್ತಡ ಕ್ರಮವಾಗಿ ನಿವಾರಣೆ. ಹೊಸ ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಮಕ್ಕಳ ವಿದ್ಯಾಭ್ಯಾಸದತ್ತ ಗಮನ. ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ.

ಕುಂಭ: ಎಂದಿನಂತೆ ಸೇವಾ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗದಲ್ಲಿ ಶ್ಲಾಘನಾರ್ಹ ಸಾಧನೆ. ಮನೆಯಲ್ಲಿ ದೇವತಾ ಕಾರ್ಯ. ವಿವಾಹಾಸಕ್ತರಿಗೆ ಯೋಗ್ಯ ಸಂಬಂಧ ಒದಗುವ ನಿರೀಕ್ಷೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಪ್ರಗತಿ. ಮೀನ: ಶನಿಮಹಾತ್ಮನ ಅನುಗ್ರಹದಿಂದ ಸ್ಥಗಿತಗೊಂಡ ಕಾರ್ಯಗಳ ಮುಂದುವರಿಕೆ. ಉದ್ಯೋಗದಲ್ಲಿ ಯಶಸ್ಸು. ಸರಕಾರಿ ಅಧಿಕಾರಿಗಳು ಮತ್ತಷ್ಟು ನೌಕರರಿಂದ ಉತ್ತಮ ಸ್ಪಂದನ. ಸೇವಾರೂಪದ ವೃತ್ತಿಯಲ್ಲಿ ಮುನ್ನಡೆ. ಮಾತೃವರ್ಗದ ಸದಾಶಯದಿಂದ ಕಾರ್ಯಗಳಲ್ಲಿ ಜಯ .

Advertisement

Udayavani is now on Telegram. Click here to join our channel and stay updated with the latest news.

Next