Advertisement

ರಾಶಿ ಫಲ; ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ, ದೀರ್ಘ‌ ಪ್ರಯಾಣ ಸಂಭವ

07:52 AM Dec 30, 2022 | Team Udayavani |

ಮೇಷ: ಗುರುಹಿರಿಯರ ಆಶೀರ್ವಾದ ಸಹಕಾರ. ನಿರೀಕ್ಷಿತ ಸ್ಥಾನ ಮಾನ ಗೌರವ ಪ್ರಾಪ್ತಿ. ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ. ದಾಂಪತ್ಯ ತೃಪ್ತಿಕರ.

Advertisement

ವೃಷಭ: ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಜನಮನ್ನಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನ ಲಾಭ. ದಾಂಪತ್ಯ ತೃಪ್ತಿಕರ. ಗುರುಹಿರಿಯರಿಂದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಮಿಥುನ: ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ದಾಂಪತ್ಯ ಸುಖ ವೃದ್ಧಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ.

ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರದಲ್ಲಿ ಅಡೆತಡೆಗಳು ಕಂಡು ಬಂದಾವು. ದಾಂಪತ್ಯ ಸುಖ ಮಧ್ಯಮ. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.

ಸಿಂಹ: ದೂರ ಸಂಚಾರ ಸಂಭವ. ಪರಿಸ್ಥಿತಿಗೆ ಸರಿಯಾಗಿ ಕಾರ್ಯವೈಖರಿ. ಕೆಲವೊಮ್ಮೆ ಕುಚೇಷ್ಠೆ ನಡೆದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುರುಹಿರಿಯರ ಆರೋಗ್ಯ ಗಮನಹರಿಸಿ. ದಾಂಪತ್ಯ ತೃಪ್ತಿಕರ.

Advertisement

ಕನ್ಯಾ: ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಪರ್ಧೆಗೆ ಆಸ್ಪದ ನೀಡದಿರಿ. ಬಂಧುಮಿತ್ರರಲ್ಲಿ ಸಂಯಮದ ನಡೆ ಅಗತ್ಯ. ದಾಂಪತ್ಯ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂ ಮೀರಿದ ಧನಾಗಮ.

ತುಲಾ:ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿಯಲ್ಲಿ ಸಫ‌ಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರದಲ್ಲಿ ವಿಳಂಬ ಇತ್ಯಾದಿ ಫ‌ಲ.

ವೃಶ್ಚಿಕ: ದೈರ್ಯ ಪರಾಕ್ರಮ ಶೌರ್ಯ ಆತ್ಮಸ್ಥೈರ್ಯದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ. ಹಿರಿಯರ ಆರೋಗ್ಯ ಗಮನಿಸಿ.

ಧನು: ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಮಕರ: ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಆರೋಗ್ಯ ವೃದ್ಧಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ.

ಕುಂಭ: ಅಧ್ಯಯನಶೀಲತೆ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರು ಹಿರಿಯರ ಆರೋಗ್ಯ ವೃದ್ಧಿ.

ಮೀನ: ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ. ದಾಂಪತ್ಯ ಸುಖ ವೃದ್ಧಿ

Advertisement

Udayavani is now on Telegram. Click here to join our channel and stay updated with the latest news.

Next