Advertisement

ರಾಶಿ ಫಲ; ಆರೋಗ್ಯದ ಬಗ್ಗೆ ಗಮನವಿರಲಿ, ಅತಿಯಾದ ಕಾರ್ಯ ಒತ್ತಡ

07:10 AM Dec 22, 2022 | |

ಮೇಷ: ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಕುಟುಂಬಿಕರೊಂದಿಗೆ ಸಂತೋಷದ ಸಮಯ.

Advertisement

ವೃಷಭ: ಜವಾಬ್ದಾರಿಯುತ ಕಾರ್ಯವೈಖರಿ ಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಹಣಕಾಸಿನ ಬಗ್ಗೆ ವ್ಯವಹರಿಸುವಾಗ ದಾಕ್ಷಿಣ್ಯ ಬೇಡ.

ಕರ್ಕ: ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರದಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದ ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ದಾಂಪತ್ಯ ಸಮಾಧಾನಕರ. ವಿದ್ಯಾರ್ಥಿಗಳಿಗೆ ಅನುಕೂಲ.

Advertisement

ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ವ್ಯವಹಾರದಲ್ಲಿ ನಿರೀಕ್ಷಿತ ಸ್ಥಾನ.

ತುಲಾ: ಆರೋಗ್ಯ ವೃದ್ಧಿ. ಅತೀ ಆಸೆ ಮಾಡದೇ ಬಂದ ಅವಕಾಶ ಉಪಯೋಗಿಸಿಕೊಳ್ಳಿ. ಉತ್ತಮ ಜನ ಮನ್ನಣೆ. ನಿರೀಕ್ಷೆಗಿಂತಲೂ ಅಧಿಕ ಧನಾರ್ಜನೆ. ನಿರೀಕ್ಷಿಸಿದ ಕಾರ್ಯ ಸಾಧಿಸಿದ ಸಮಾದಾನ. ವಿದ್ಯಾರ್ಥಿಗಳಿಗೆ ದಂಪತಿಗಳಿಗೆ ಶುಭ. ಹಿರಿಯರ ಸಹಕಾರ ಪ್ರೋತ್ಸಾಹ.

ವೃಶ್ಚಿಕ: ರಾಜಕೀಯ ನಾಯಕರಿಗೆ ಜನಮನ್ನಣೆ. ಹೆಚ್ಚಿನ ಜವಾಬ್ದಾರಿ ಸಿಗುವ ಅವಕಾಶ. ನೂತನ ಮಿತ್ರರ ಸಮಾಗಮ. ಬಂಧುಗಳಿಂದ ಪ್ರೋತ್ಸಾಹ. ಸಂಸಾರಿಕರಿಗೆ ವಿದ್ಯಾರ್ಥಿಗಳಿಗೆ ಗೌರವ. ಅವಿವಾಹಿತರಿಗೆ ವಿವಾಹ ಭಾಗ್ಯ. ದಾರ್ಮಿಕ ಕಾರ್ಯದಲ್ಲಿ ಭಾಗಿ.

ಧನು: ಪಾಲುಗಾರಿಕಾ ವ್ಯವಹಾರಸ್ಥರೂ ದಂಪತಿಗಳು ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಪ್ರಯಾಣ ಅವಕಾಶ. ಸ್ಥಾನಮಾನಕ್ಕೆ ಕೊರತೆ ಕಾಣದು. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯ ಅನುಕೂಲಕರ.

ಮಕರ: ಪರದೇಶದ ಕಾರ್ಯಗಳಲ್ಲಿ ನಿರೀಕ್ಷಿತ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಿತ್ರರಲ್ಲಿ ಮಕ್ಕಳಲ್ಲಿ ತಾಳ್ಮೆಯಿಂದ ವರ್ತಿಸಿ. ಆಹಾರೋದ್ಯಮ, ಆಭರಣ, ವಸ್ತ್ರ ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ.

ಕುಂಭ: ಅನ್ಯರ ಸಹಾಯ ನಿರೀಕ್ಷಿಸದೆ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಗುರಿಸಾಧಿಸಿರಿ. ಧನಾರ್ಜನೆಗೆ ಅನುಕೂಲಕರ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಯಶಸ್ಸು. ದಾಂಪತ್ಯ ಸುಖ ತೃಪ್ತಿ. ಗಣಿ, ಭೂ ವ್ಯವಹಾರ, ಆಹಾರೋದ್ಯಮಕ್ಕೆ ಅನುಕೂಲ.

ಮೀನ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ದೇಶ ವಿದೇಶದ ವಿದ್ಯಾಲಯದಲ್ಲಿ ಅವಕಾಶ. ದೀರ್ಘ‌ ಪ್ರಯಾಣದಿಂದ ಲಾಭ. ರಾಜಕೀಯ ಕಾರ್ಯ ಕ್ಷೇತ್ರದಲ್ಲಿ ರಹಸ್ಯ ವ್ಯವಹಾರದಿಂದ ನಿರೀಕ್ಷಿತ ಸಾಧನೆ. ಅಭಿವೃದ್ಧಿದಾಯಕ ಧನಾರ್ಜನೆ. ದಂಪತಿಗಳು ಅನ್ಯೋನ್ಯತೆಗೆ ಗಮನಹರಿಸಿ.

Advertisement

Udayavani is now on Telegram. Click here to join our channel and stay updated with the latest news.

Next