Advertisement

ರಾಶಿ ಫಲ; ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ, ಅನಿರೀಕ್ಷಿತ ಧನಾಗಮ

07:11 AM Dec 23, 2022 | Team Udayavani |

ಮೇಷ: ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ ವರ್ಚಸ್ಸು ವೃದ್ಧಿ. ಜನಸಂಪರ್ಕದಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಉತ್ತಮ ವಾಕ್‌ ಚತುರತೆ. ಸರ್ವವರ್ಗದವರಿಂದಲೂ ಸಹಾಯ ಸಹಕಾರ ಪ್ರಾಪ್ತಿ.

Advertisement

ವೃಷಭ: ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಆರ್ಥಿಕವಾಗಿ ಅಧಿಕ ಧನ ಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರ ವಿಚಾರದಲ್ಲಿ ಸ್ಪಷ್ಟತೆಗೆ ವರ್ತನೆ. ಸರ್ವಕಾರ್ಯಗಳಲ್ಲಿ ಸಫ‌ಲತೆ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ: ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ. ಹಿರಿಯರ ಆರೋಗ್ಯ ಗಮನಿಸಿ.

ಕರ್ಕ: ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧುಮಿತ್ರರ ಭೇಟಿ. ಉದ್ಯೋಗ ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರ ಸುಖ. ಸರಕಾರಿ ಕೆಲಸಗಳಲ್ಲಿ ಪ್ರಗತಿ.

ಸಿಂಹ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪ್ರಗತಿ. ದಾಂಪತ್ಯ ತೃಪ್ತಿಕರ.

Advertisement

ಕನ್ಯಾ: ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು. ಕೀರ್ತಿ ಸಂಪಾದನೆ. ಜನಮನ್ನಣೆ. ದಾಂಪತ್ಯದಲ್ಲಿ ಹೆಚ್ಚಿದ ಅನುರಾಗ. ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ.

ತುಲಾ: ಅನಿರೀಕ್ಷಿತ ಧನಾಗಮನ. ಉತ್ತಮ ವಾಕ್‌ ಚತುರತೆ. ಕೌಟುಂಬಿಕ ಸುಖ ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಕಾರ್ಯಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ. ವಿವಾಹ ಯೋಗ.

ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರುಹಿರಿಯರ ಮೇಲಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ದಾಂಪತ್ಯ ಸುಖ ಅಭಿವೃದ್ಧಿ. ಉದಾರತೆ, ದೈರ್ಯ, ನಿಷ್ಠೆ ಕಾರ್ಯದಿಂದ ಜನಮನ್ನಣೆ.

ಧನು: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾದಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಮಕರ: ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಸಾಂಸಾರಿಕ ಸುಖದಲ್ಲಿ ಅಭಿವೃದ್ಧಿ. ಕುಂಭ: ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ದಂಪತಿ ಗಳು, ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿ. ಪರದೇಶ ಸ್ಥಿತ ಮಿತ್ರರಿಂದ ಸಹಾಯ ಒದಗಿ ಬರುವುದು. ಪ್ರಯಾಣದಿಂದ ಅನುಕೂಲ.

ಮೀನ: ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ. ದೂರಪ್ರಯಾಣದಿಂದ ಕಾರ್ಯ ಸಫ‌ಲತೆ. ಕಾರ್ಮಿಕರು ಸಹೋದರರಲ್ಲಿ ತಾಳ್ಮೆಯಿಂದಲೂ ಪ್ರೀತಿಯಿಂದಲೂ ಕಾರ್ಯ ನಿರ್ವಹಿಸಿ.

Advertisement

Udayavani is now on Telegram. Click here to join our channel and stay updated with the latest news.

Next