Advertisement

Daily Horoscope: ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು, ಧನಪ್ರಾಪ್ತಿ

07:14 AM Feb 24, 2024 | Team Udayavani |

ಮೇಷ: ಆಯ್ಕೆಗಳ ವಿಷಯದಲ್ಲಿ ಗೊಂದಲ ಬೇಡ. ಉದ್ಯೋಗಸ್ಥರು ಕಾರ್ಯ ನಿರ್ವಹಣೆ ಯಲ್ಲಿ ಯಶಸ್ವಿ. ಕಟ್ಟಡ ನಿರ್ಮಾಣ ಗುತ್ತಿಗೆದಾರರು, ನಿರ್ಮಾಣ ಸಾಮಗ್ರಿ ವಿತರಕರು ಮೊದಲಾದವರಿಗೆ ಸಮಯದೊಂದಿಗೆ ಸೆಣಸಾಟ.

Advertisement

ವೃಷಭ: ಉದ್ಯೋಗಸ್ಥರಿಗೆ ಆಶಾದಾಯಕ ಪರಿ ಸ್ಥಿತಿ. ಸರಕಾರಿ ನೌಕರರಿಗೆ ಶುಭ ಸಮಾಚಾರ. ಸಹಕಾರಿ ಕ್ಷೇತ್ರದವರಿಗೆ ಜವಾಬ್ದಾರಿ ಹೆಚ್ಚಳ. ವಿದೇಶಗಳಲ್ಲಿ ನೌಕರಿ ಯಲ್ಲಿರುವವರಿಗೆ ತಾಯ್ನಾಡಿಗೆ ಬರುವ ಯೋಗ.

ಮಿಥುನ: ಸರಕಾರಿ ಉದ್ಯೋಗಸ್ಥರಿಗೆ ಹೆಚ್ಚುವರಿ ಜವಾಬ್ದಾರಿಗಳು. ಖಾಸಗಿ ಕ್ಷೇತ್ರದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ತವಕ. ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ. ಕೃಷಿ ಸಾಧನಗಳು, ಕೃಷ್ಯುತ್ನನ್ನಗಳು, ರಸಗೊಬ್ಬರಗಳು ಮೊದಲಾದವುಗಳ ವಿತರಕರಿಗೆ ಲಾಭ.

ಕರ್ಕಾಟಕ: ಹವಾಮಾನ ವೈಪರೀತ್ಯದಿಂದ ಹಿರಿಯರ ಮತ್ತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ. ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ತಾಂತ್ರಿಕ ವಿಭಾಗಗಳಲ್ಲಿ ದುಡಿಯುವವರಿಗೆ ಕೆಲಸದ ಒತ್ತಡ. ಮೇಲಧಿಕಾರಿಗಳಿಂದ ಉತ್ತೇಜನ.

ಸಿಂಹ: ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ. ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ. ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ. ಪ್ರತಿಭೆಗೆ ತಕ್ಕಂತೆ ಅವಕಾಶ ಲಭ್ಯ. ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ.

Advertisement

ಕನ್ಯಾ: ಆಪ್ತರಿಂದ ನಿರೀಕ್ಷಿತ ಸಹಾಯ ಪ್ರಾಪ್ತಿ. ನಿಯೋಜಿತ ಕಾರ್ಯ ಮುಗಿಸಲು ಸಹೋದ್ಯೋಗಿಯ ಸಹಾಯ. ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಗೋಚರ.

ತುಲಾ: ದೇವ ಮಂದಿರ ದರ್ಶನದಿಂದ ಮನಸ್ಸು ಸ್ಥಿಮಿತಕ್ಕೆ. ಉದ್ಯೋಗಸ್ಥರಿಂದ ಜವಾಬ್ದಾರಿಗಳ ಸಮರ್ಥ ನಿರ್ವಹಣೆ. ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿವೃದ್ಧಿಯಲ್ಲಿ ಆಸಕ್ತಿ.

ವೃಶ್ಚಿಕ: ಮನೆಯಲ್ಲಿ ಹಿತಕರ ವಾತಾವರಣ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ನಿರ್ಮಾಪಕರಿಗೆ ಉತ್ತಮ ಬೇಡಿಕೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ಧನು: ಅನಿರೀಕ್ಷಿತ ಧನಪ್ರಾಪ್ತಿ. ವ್ಯಾಪಾರ ವಿಸ್ತ ರಣೆಗೆ ಚಿಂತನೆ. ವಸ್ತ್ರ, ಆಭರಣ, ಕಟ್ಟಡ ನಿರ್ಮಾಣ ಸಾಮಗ್ರಿಗಳ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ತಯಾರಿ, ಉಡುಪು ತಯಾರಿ ಮೊದ ಲಾದ ಕಸಬುದಾರರಿಗೆ ಕೈತುಂಬಾ ಕೆಲಸ.

ಮಕರ: ಸಹನೆ, ಜಾಣತನಗಳಿಂದ ಕಾರ್ಯಸಾಧನೆ. ಸಹೋದ್ಯೋಗಿಗಳಿಂದ ಅಪೇಕ್ಷಿತ ಸಹಕಾರ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಹಿರಿಯರ ಆರೋಗ್ಯ ಸುಧಾರಣೆ. ಮಕ್ಕಳ ಅಧ್ಯಯನಾಸಕ್ತಿ ಚುರುಕುಗೊಳಿಸುವ ಪ್ರಯತ್ನ.

ಕುಂಭ: ಆರೋಗ್ಯ ಕಾಯ್ದುಕೊಳ್ಳುವ ಪ್ರಯತ್ನ. ಸೇವಾ ಕಾರ್ಯಗಳ ವಿಸ್ತರಣೆಗೆ ಸಮಾನಮನಸ್ಕರಿಂದ ಸಕ್ರಿಯ ಸಹಕಾರ. ಶಿಕ್ಷಣ ಕ್ಷೇತ್ರದಲ್ಲಿ ದುಡಿಯುವವರಿಗೆ ಹೊಸ ಜವಾಬ್ದಾರಿಗಳು ಸನ್ನಿಹಿತ. ಸರಕಾರಿ ನೌಕರರಿಗೆ ವರ್ಗಾವಣೆಯ ಚಿಂತೆ.

ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕವಾದ ಸ್ಥಿರ ವಾತಾವರಣ. ವ್ಯವಹಾರಸ್ಥರಿಗೆ ಸರಕಾರಿ ಅಧಿಕಾರಿಗಳಿಂದ ಮತ್ತು ನೌಕರರಿಂದ ಒಳ್ಳೆಯ ರೀತಿಯಲ್ಲಿ ಸ್ಪಂದನ.ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ರೀತಿಯಲ್ಲಿ ಪ್ರಗತಿ. ವ್ಯವಹಾರ ನಿರ್ವಹಣೆಯಲ್ಲಿ ಸಂಗಾತಿಯಿಂದ ಸಕ್ರಿಯ ಸಹಕಾರ.

Advertisement

Udayavani is now on Telegram. Click here to join our channel and stay updated with the latest news.

Next