Advertisement

ರಾಶಿ ಫಲ; ಕೆಲಸ ಕಾರ್ಯಗಳಲ್ಲಿ ಸರಿಯಾದ ವಿವೇಚನೆ ಯೋಜನೆ ಅಗತ್ಯ, ಅನಗತ್ಯ ಅಪವಾದಕ್ಕೆ ಗುರಿಯಾಗದಿರಿ

07:15 AM Jan 05, 2023 | Team Udayavani |

ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ವಿದ್ಯಾರ್ಥಿಗಳಿಗೆ ಜಿಜ್ಞಾಸುಗಳಿಗೆ ಅನುಕೂಲಕರ. ಸತ್ಕರ್ಮಕ್ಕಾಗಿ ಧನ ವ್ಯಯ ಹಾಗೂ ಉತ್ತಮ ಉಳಿತಾಯಕ್ಕಾಗಿ ಕಾರ್ಯಗತ. ಅವಿವಾಹಿತರಿಗೆ ವಿವಾಹ ಯೋಗ.

Advertisement

ವೃಷಭ: ಸರಿಯಾದ ಜವಾಬ್ದಾರಿಯುತ ಕಾರ್ಯ ಪ್ರವೃತ್ತಿಯಿಂದ ಜನಮನ್ನಣೆ. ಪೂಜ್ಯತೆ ಗೌರವ ಆದರಗಳು ಪ್ರಾಪ್ತಿ. ಅಧಿಕ ಪರಿಶ್ರಮದಿಂದ ಕೂಡಿದ ದಿನ. ದೇಹಾರೋಗ್ಯ ಬಗ್ಗೆ ಉದಾಸೀನತೆ ಸಲ್ಲದು. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ.

ಮಿಥುನ: ಕೆಲಸ ಕಾರ್ಯಗಳಲ್ಲಿ ಸರಿಯಾದ ವಿವೇಚನೆ ಯೋಜನೆ ಅಗತ್ಯ. ಅನಗತ್ಯ ಅಪವಾದಕ್ಕೆ ಗುರಿಯಾಗದಿರಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ದಾಂಪತ್ಯ ತೃಪ್ತಿದಾಯಕ.

ಕರ್ಕ: ನಿರೀಕ್ಷಿತ ಧನ ಸಂಪತ್ತು ವೃದ್ಧಿ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಗೌರವ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಮಾನಸಿಕ ಒತ್ತಡ ಕಂಡುಬಂದೀತು. ಮಕ್ಕಳ ಬಗ್ಗೆ ಚಿಂತೆ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಸಿಂಹ: ದೀರ್ಘ‌ ಪ್ರಯಾಣ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಲ್ಲಿ ಎಚ್ಚರಿಕೆಯ ನಡೆಯಿಂದ ಪರಿಸ್ಥಿತಿ ಅನುಕೂಲಕರವಾದೀತು. ದಾಂಪತ್ಯ ಸುಖ ಉತ್ತಮ. ಗುರುಹಿರಿಯರ ಮಾರ್ಗದರ್ಶನದಿಂದ ಸಫ‌ಲತೆ. ಆಸ್ತಿ ವಿಚಾರಗಳಲ್ಲಿ ನಿರ್ಣಯ ನಡೆಯುವುದು. ಕನ್ಯಾ: ಉಪಕಾರ ಮಾಡಲು ಹೋಗಿ ತೊಂದರೆಗೊಳಗಾಗಬೇಡಿ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ದಾಕ್ಷಿಣ್ಯ ತೊರೆದು ವ್ಯವಹರಿಸಿದರೆ ಅಭಿವೃದ್ಧಿ ಕಂಡೀತು. ಹಣಕಾಸಿನ ಆದಾಯ ಮಾರ್ಗ ಸುಗಮ. ನಾನಾ ರೀತಿಯಲ್ಲಿ ಹೂಡಿಕೆ ಸಂಭವ.

Advertisement

ತುಲಾ: ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧುಮಿತ್ರರ ಮಾತೃಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಸರಕಾರಿ ಕೆಲಸಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ಮಧ್ಯಮ.

ವೃಶ್ಚಿಕ: ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತೆಯಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ.

ಧನು: ಅತಿಯಾದ ಆತ್ಮ ವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರೊÂàನ್ಮುಖರಾಗಿ ನಿಷ್ಠುರ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಲಾಭ ಸಂಭವ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾವಹಿಸಿ.

ಕುಂಭ: ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು. ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಹೆಚ್ಚು ಪರಿಶ್ರಮ ಸಂಭವ.

ಮೀನ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ಸಾಂಸಾರಿಕ ಸುಖ ಮಧ್ಯಮ.

Advertisement

Udayavani is now on Telegram. Click here to join our channel and stay updated with the latest news.

Next