Advertisement

Daily Horoscope: ಹವಾಮಾನ ವೈಪರೀತ್ಯದಿಂದ ಹಿರಿಯರ ಮತ್ತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ

07:17 AM Jul 15, 2024 | Team Udayavani |

ಮೇಷ: ಸಪ್ತಾಹ ಆರಂಭದ ದಿನ ಉದ್ಯೋಗಸ್ಥರಿಗೆ ಕಿರಿಕಿರಿ. ಕಟ್ಟಡ ನಿರ್ಮಾಣ ಗುತ್ತಿಗೆದಾರರು, ನಿರ್ಮಾಣ ಸಾಮಗ್ರಿ ವಿತರಕರಿಗೆ ಮಾಮೂಲು ಒತ್ತಡ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಶಾಲಾ ಮಕ್ಕಳಿಗೆ ಉತ್ಸಾಹ ವೃದ್ಧಿ.

Advertisement

ವೃಷಭ: ಸರಕಾರಿ ನೌಕರರಿಗೆ ಶುಭ ಸಮಾಚಾರ. ಸಹಕಾರಿ ಕ್ಷೇತ್ರದವರಿಗೆ ಜವಾಬ್ದಾರಿ ಹೆಚ್ಚಳ. ಮುದ್ರಣ ಕ್ಷೇತ್ರದವರಿಗೆ ಸಮಯ ದೊಂದಿಗೆ ಮೇಲಾಟ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳ ಮುನ್ನಡೆ.

ಮಿಥುನ: ಸಹಕಾರಿ ರಂಗದವರಿಗೆ ಗುರಿ ತಲುಪುವ ಒತ್ತಡ. ಪತ್ರಕರ್ತರಿಗೆ ರಾಜಕಾರಣಿಗಳ ಕಾಟ. ಕೃಷಿ ಸಾಧನಗಳು, ಕೃಷ್ಯುತ್ನನ್ನಗಳು, ರಸಗೊಬ್ಬರಗಳು ಮೊದಲಾದ ಸಾಮಗ್ರಿಗಳ ವಿತರಕರಿಗೆ ಲಾಭ.

ಕರ್ಕಾಟಕ: ಹವಾಮಾನ ವೈಪರೀತ್ಯದಿಂದ ಹಿರಿಯರ ಮತ್ತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ. ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ.ತಾಂತ್ರಿಕ ವಿಭಾಗಗಳಲ್ಲಿ ದುಡಿಯುವವರಿಗೆ ಕೆಲಸದ ಒತ್ತಡ. ಸ್ವಂತ ವ್ಯವಹಾರಸ್ಥರಿಗೆ ಸಮಯದೊಂದಿಗೆ ಸೆಣಸಾಟ.

ಸಿಂಹ: ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ. ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ. ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಸಂಸಾರ ಸುಖ ಉತ್ತಮ. ಉದ್ಯೋಗಾಸಕ್ತರಿಗೆ ಸದವಕಾಶ.

Advertisement

ಕನ್ಯಾ: ಆಪ್ತರಿಂದ ನಿರೀಕ್ಷಿತ ಸಹಾಯ ಪ್ರಾಪ್ತಿ. ನಿಯೋಜಿತ ಕಾರ್ಯ ಸಕಾಲದಲ್ಲಿ ಮುಕ್ತಾಯ. ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ. ಅವಿವಾಹಿತರಿಗೆ ವಿವಾಹ ಯೋಗ.

ತುಲಾ: ಉದ್ಯೋಗಸ್ಥರಿಗೆ ಹೊಸ ವಿಭಾಗದಲ್ಲಿ ಕೆಲಸ. ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಪರಿಸರ ಅಭಿವೃದ್ಧಿಯಲ್ಲಿ ಆಸಕ್ತಿ. ಅಪರೂಪದ ಬಂಧುಗಳ ಭೇಟಿ. ಗೃಹಿಣಿಯರಿಗೆ ನೆಮ್ಮದಿ.

ವೃಶ್ಚಿಕ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ಪೀಠೊಪಕರಣ ನಿರ್ಮಾಪಕರಿಗೆ ಉತ್ತಮ ಬೇಡಿಕೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ಧನು: ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ತಯಾರಿ, ಉಡುಪು ತಯಾರಿ ಕಸಬುದಾರರಿಗೆ ಕೈತುಂಬಾ ಕೆಲಸ.ಬೌದ್ಧಿಕ ಕಾರ್ಯಗಳಲ್ಲಿ ತೊಡಗಿರುವವರ ಮೇಲೆ ಒತ್ತಡ.

ಮಕರ: ಸಹನೆ, ಜಾಣತನಗಳಿಂದ ಸುಲಭ ವಾಗಿ ಕಾರ್ಯಸಾಧನೆ. ಸಹಕಾರಿಗಳ ಸಕಾ ಲಿಕ ನೆರವು. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ.

ಕುಂಭ: ಆರೋಗ್ಯ ರಕ್ಷಣೆಯ ಕ್ರಮಗಳಲ್ಲಿ ಭಾಗಿ. ಶಿಕ್ಷಣ ಕ್ಷೇತ್ರದಲ್ಲಿ ದುಡಿಯುವವರಿಗೆ ಹೊಸ ಜವಾಬ್ದಾರಿಗಳು. ಸರಕಾರಿ ನೌಕರರಿಗೆ ವರ್ಗಾವಣೆಯ ಚಿಂತೆ. ಹಿರಿಯ ಅಧಿಕಾರಿಗಳಿಗೆ ರಾಜಕಾರಣಿಗಳ ಕಾಟ. ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಲಾಭ ಮಧ್ಯಮ.

ಮೀನ: ಉದ್ಯೋಗಸ್ಥರಿಗೆ ನೆಮ್ಮದಿಯ ವಾತಾವರಣ. ವ್ಯವಹಾರಸ್ಥರಿಗೆ ಸಂಬಂಧಪಟ್ಟವರಿಂದ ಅನುಕೂಲದ ಸ್ಪಂದನ. ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ವ್ಯವಹಾರ ನಿರ್ವಹಣೆಯಲ್ಲಿ ಕುಟುಂಬದವರಿಂದ ಸಹಕಾರ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿ.

Advertisement

Udayavani is now on Telegram. Click here to join our channel and stay updated with the latest news.

Next