Advertisement

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು, ಹೆಚ್ಚುವರಿ ಆದಾಯದ ಮಾರ್ಗ ಗೋಚರ

07:19 AM Jun 06, 2024 | Team Udayavani |

ಮೇಷ: ದಿನಕ್ಕೊಂದು ಹೊಸ ಜವಾಬ್ದಾರಿ ಬಂದರೂ ಧೃತಿಗೆಡದಿರಿ. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ಸಮಾಜಸೇವಾ ಕಾರ್ಯಗಳಲ್ಲಿ ಆಸಕ್ತಿ.

Advertisement

ವೃಷಭ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಕಿರಿಕಿರಿ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ಕೇಟರಿಂಗ್‌ ವ್ಯವಹಾರಸ್ಥರಿಗೆ ಸಾಮಾನ್ಯ ಲಾಭ. ವ್ಯವಹಾರ ಸಂಬಂಧ ಓರ್ವ ಪ್ರಮುಖ ವ್ಯಕ್ತಿಯ ಭೇಟಿ.

ಮಿಥುನ: ಉದ್ಯೋಗಸ್ಥರಿಗೆ ಸಂತೃಪ್ತಿ, ಸಮಾಧಾನದ ಅನುಭವ. ಸ್ವಂತ ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ. ಪಿತ್ರಾರ್ಜಿತ ಕೃಷಿ ಭೂಮಿಯ ಅಭಿವೃದ್ಧಿಗೆ ಸಂಕಲ್ಪ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಹಿನ್ನಡೆ. ಉದ್ಯಮಗಳಿಗೆ ಕಾನೂನು ತೊಂದರೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಸಣ್ಣ ಪ್ರಮಾಣದ ಕೃಷಿಕಾರ್ಯ ದಲ್ಲಿ ಸಂತೃಪ್ತಿ.

ಸಿಂಹ: ವಿಶೇಷ ಸಾಧನೆಗಾಗಿ ಉದ್ಯೋಗ ಸ್ಥಾನದಲ್ಲಿ ಮನ್ನಣೆ. ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ಸಾಮಾಜಿಕ ಪಿಡುಗು ಗಳ ನಿವಾರಣೆಗೆ ಸಾಮೂಹಿಕ ಚಿಂತನೆ. ಅಪರಿಚಿತ ಕ್ಷೇತ್ರದಿಂದ ಪಾಲುದಾರಿಕೆ ಪ್ರಸ್ತಾವ ಬರುವ ಸಾಧ್ಯತೆ.

Advertisement

ಕನ್ಯಾ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ . ಸಟ್ಟಾ ವ್ಯವಹಾರದಿಂದ ದೂರ ವಿರುವುದರಿಂದ ಹಿತ. ಪಾಲುದಾರಿಕೆ ಉದ್ಯಮದಲ್ಲಿ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ.

ತುಲಾ: ಉದ್ಯೋಗದಲ್ಲಿ ಅನುಭವಸ್ಥರಿಗೆ ಗೌರವ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ವಸ್ತ್ರ, ಆಭರಣ ಖರೀದಿ. ಮಹಿಳೆಯರ ನೇತೃತ್ವದ ಉದ್ಯಮಗಳ ಏಳಿಗೆ ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಉತ್ತೇಜಕ ಪರಿಸ್ಥಿತಿ. ಸರಕಾರಿ ಉದ್ಯೋಗಿಗಳಿಗೆ ಕೊಂಚ ನೆಮ್ಮದಿ. ಯಂತ್ರೋಪಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.

ಧನು: ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ ವರ್ತನೆ. ನಿವಾಸ ಬದಲಾವಣೆಯ ಪ್ರಯತ್ನ ಮುಂದುವರಿಕೆ. ಉದ್ಯೋಗಾಸಕ್ತ ಶಿಕ್ಷಿತರಿಗೆ ಒಳ್ಳೆಯ ಅವಕಾಶಗಳು ಗೋಚರ. ವ್ಯವಹಾರದ ಸಂಬಂಧ ಉತ್ತರಕ್ಕೆ ಸಣ್ಣ ಪ್ರಯಾಣ.

ಮಕರ: ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ ನಿಯೋಜನೆ. ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸು ತ್ತಿರುವವರಿಗೆ ಅವಕಾಶಗಳು ಲಭ್ಯ. ಬಂಧುಗಳೊಂದಿಗೆ ಸಂಬಂಧ ಸುಧಾರಣೆ.ಮಕ್ಕಳ ಕ್ಷೇಮ ಚಿಂತನೆ.

ಕುಂಭ: ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಉದ್ಯೋಗದಲ್ಲಿ ಹೆಚ್ಚುವರಿ ಹೊಣೆಗಾರಿಕೆಗಳು. ಸಮಾಜ ಸೇವಾಕಾರ್ಯ ಗಳಿಗೆ ಮತ್ತಷ್ಟು ಅವಕಾಶಗಳು. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ. ಸಣ್ಣ ವ್ಯಾಪಾರಿಗಳಿಗೆ ಶುಭ.

ಮೀನ: ಉದ್ಯೋಗ ಸ್ಥಾನದಲ್ಲಿ ಹೊಸ ವಾತಾವರಣ. ಅಪೇಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಕಾಲ ಸನ್ನಿಹಿತ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ.

Advertisement

Udayavani is now on Telegram. Click here to join our channel and stay updated with the latest news.

Next