Advertisement

ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ

07:19 AM Mar 17, 2023 | Team Udayavani |

ಮೇಷ: ವ್ಯಾಪಾರ ವ್ಯವಹಾರ ಉದ್ಯೋಗದಲ್ಲಿ ವಿಶ್ವಾಸ ಪಾತ್ರರಾಗಿ ಜವಾಬ್ದಾರಿ ನಿರ್ವಹಿಸಿ. ಪರರ ಹಣ ನಿರ್ವಹಿಸುವಾಗ ಪಾರದರ್ಶಕತೆಗೆ ಆದ್ಯತೆ ನೀಡಿ. ದೈರ್ಯ ಹಿಂಜರಿಕೆ ಹೆದರದೇ ಕೆಲಸ ಮಾಡಿರಿ. ಅವಿವಾಹಿತರಿಗೆ ವಿವಾಹ ಭಾಗ್ಯ.

Advertisement

ವೃಷಭ: ಶಹ ವಾಹನಾದಿ ಸುಖ. ನೂತನ ಬಂಧುಮಿತ್ರರ ಸಂಗಮ. ಕೆಲಸ ಕಾರ್ಯಗಳಲ್ಲಿ ಗೌರವಾನ್ವಿತ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಜಾಣತನ ಜವಾಬ್ದಾರಿ ಪ್ರದರ್ಶಿಸಿ. ಜನಮನ್ನಣೆ ಲಭ್ಯ. ಉತ್ತಮ ಪ್ರಗತಿದಾಯಕ ಧನಾರ್ಜನೆ. ನಾನಾ ರೀತಿಯಲ್ಲಿ ಧನ ಸದ್ವಿನಿಯೋಗ.

ಮಿಥುನ: ಧಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ದೇವತಾ ಸ್ಥಳಗಳ ಸಂದರ್ಶನ. ಮನಃ ತೃಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಯೋಗ್ಯ ವಧು ವರ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉಳಿತಾಯದಲ್ಲಿ ಆಸಕ್ತಿ. ಗುರುಹಿರಿಯರಿಗೆ ಸಂತೋಷ.

ಕರ್ಕ: ದೀರ್ಘ‌ ಪ್ರಯಾಣ. ಗುರುಹಿರಿಯರಿಗೆ ಸಂತೋಷಪ್ರದರಾಗಿರಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯದಲ್ಲಿ ಸುದಾರಣೆ. ಸಾಮಾನ್ಯ ಧನ ವೃದ್ಧಿ.

ಸಿಂಹ: ಅನಗತ್ಯ ವಿಚಾರಗಳಲ್ಲಿ ತೊಡಗಿಸಿ ಕೊಂಡು ತೊಂದರೆ ಎಳೆದುಕೊಳ್ಳದಿರಿ. ದಾಕ್ಷಿಣ್ಯಕ್ಕೆ ಒಳಗಾಗದೆ ಜವಾಬ್ದಾರಿಯುತ ಮಾತುಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ದೂರದ ಮಿತ್ರರಿಂದ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ದಾಂಪತ್ಯ ತೃಪ್ತಿಕರ.

Advertisement

ಕನ್ಯಾ: ಹಠಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗುವುದರಿಂದ ಎಲ್ಲಾ ವ್ಯವಹಾರಗಳಲ್ಲಿ ಗಣನೀಯ ಪ್ರಗತಿ. ಕೀರ್ತಿ ಶ್ಲಾಘನೆ ಲಭ್ಯ. ಜವಾಬ್ದಾರಿಯುತ ಮಾತಿನಿಂದ ಜನಪ್ರಶಂಸೆ. ವಿದ್ಯಾರ್ಥಿಗಳಿಗೆ ಜ್ಞಾನ ವಿಚಾರಗಳಿಗೆ ಸದ್‌ವ್ಯಯ.

ತುಲಾ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಬಹುವಿಧದ ಚಟುವಟಿಕೆಗಳಿಂದ ಕೂಡಿದ ದಿನಚರಿ. ಹೆಚ್ಚಿದ ಧನ ಸಂಪತ್ತು. ಮಿತ್ರರ ಸಹಕಾರ. ಮಾನ್ಯತೆ ಲಭ್ಯ. ಅಧ್ಯಯನ ಆಕಾಂಕ್ಷಿಗಳಿಗೆ ಹೆಚ್ಚಿದ ಅವಕಾಶ ಸವಲತ್ತು. ಗೃಹ ಉಪಯೋಗೀ ವಸ್ತುಗಳ ಸಂಗ್ರಹ.

ವೃಶ್ಚಿಕ: ದೈರ್ಯ ಶೌರ್ಯ ಪರಾಕ್ರಮ ಅಧಿಕಾರಯುತ ನಡೆಯಿಂದ ಕೂಡಿದ ದಿನಚರಿ. ಮಾತಿನಲ್ಲಿ ತಾಳ್ಮೆ ಪ್ರೀತಿ ವಹಿಸಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಪರಸ್ಪರ ಸಹಕಾರ ಲಭ್ಯ. ಹೂಡಿಕೆ ವಿಚಾರಗಳಲ್ಲಿ ಪ್ರಗತಿ.

ಧನು: ಸಮಯ ಸಂದರ್ಭಕ್ಕೆ ಸರಿಯಾಗಿ ಪ್ರತಿಭೆ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ ಪ್ರಶಂಸೆ ಲಭ್ಯ. ಆರ್ಥಿಕವಾಗಿ ಬಲಿಷ್ಠತೆ. ಉತ್ತಮ ವಾಕ್‌ ಚತುರತೆ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಬಹುಜನರ ಸಹಾಯ ಮಾನ್ಯತೆ. ಜನಮನ್ನಣೆ ಲಭ್ಯ. ಆಸ್ತಿ ವಿಚಾರದಲ್ಲಿ ಸಂತೋಷ. ಬಂಧುಮಿತ್ರರ ಆಗಮನ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.

ಕುಂಭ: ಸಾಂಸಾರಿಕ ಜವಾಬ್ದಾರಿ. ಅವಿವಾಹಿತರಿಗೆ ವಿವಾಹ ಯೋಗ. ದೇವತಾ ಸ್ಥಳ ಸಂದರ್ಶನ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಹೆಚ್ಚಿದ ಲಾಭ. ಸಮಾಜಮುಖೀ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. ಹಿರಿಯರನ್ನು ಗೌರವಿಸಿ.

ಮೀನ: ಆರೋಗ್ಯ ಸುದೃಢ. ಅಧಿಕ ಧನಲಾಭ. ಸರಳತೆಯಿಂದ ಕೂಡಿದ ದಿನಚರಿ. ಜನಮೆಚ್ಚುಗೆಯ ವ್ಯವಹಾರ. ದೂರದ ಬಂಧುಮಿತ್ರರ ಭೇಟಿ. ಸಂಭ್ರಮದ ವಾತಾವರಣ. ಹೂಡಿಕೆಗಳಲ್ಲಿ ಆಸಕ್ತಿ ಮುಂದುವರಿಕೆ.

 

Advertisement

Udayavani is now on Telegram. Click here to join our channel and stay updated with the latest news.

Next