Advertisement

ರಾಶಿ ಫಲ: ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ ಸಂಭವ, ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ

07:16 AM Mar 18, 2023 | Team Udayavani |

ಮೇಷ: ತಾಳ್ಮೆ, ಸಹನೆ ಕಳೆದುಕೊಳ್ಳದೇ ಕಾರ್ಯ ನಿರ್ವಹಿಸಿ. ಆರ್ಥಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಏರುಪೇರು ಸಂಭವ. ಮನೆ, ಆಸ್ತಿ ವಿಚಾರದಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.

Advertisement

ವೃಷಭ: ಅನಿರೀಕ್ಷಿತ ಸ್ಥಾನಮಾನ ಗೌರವಾದಿ ಸುಖ ಸಂಭವ. ಉದ್ಯೋಗ ವ್ಯವಹಾರದಲ್ಲಿ ಸಫ‌ಲತೆ. ದೈನಂದಿನ ಚಟುವಟಿಕೆಗಳಲ್ಲಿ ಪರಿಶುದ್ಧತೆಯಿಂದ ಮಾನಸಿಕ ನೆಮ್ಮದಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ.

ಮಿಥುನ: ಉತ್ತಮ ವಾಕ್‌ಚತುರತೆ. ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಪ್ರಗತಿ. ಗುರುಹಿರಿಯರಿಂದ ಸಹಕಾರ ಮಾರ್ಗದರ್ಶನದ ಲಾಭ. ಗೃಹದಲ್ಲಿ ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.

ಕರ್ಕ: ನಿರೀಕ್ಷೆಯಂತೆ ಅಧಿಕ ಧನಾಗಮನ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ ಸಂಭವ. ಆಸ್ತಿ ಹೂಡಿಕೆ ವಿಚಾರಗಳಲ್ಲಿ ಪ್ರಗತಿ. ದೂರದ ಮಿತ್ರರಿಂದ ಸಹಾಯ ಸುವಾರ್ತೆ.

ಸಿಂಹ: ಹಲವಾರು ವಿಳಂಬಿತ ಕೆಲಸ ಕಾರ್ಯಗಳಲ್ಲಿ ಪ್ರಗತಿ ಸಂಭವ. ದೂರದ ವ್ಯವಹಾರದಲ್ಲಿ ಧನಲಾಭ. ಮಾತಿನಲ್ಲಿ ಜಾಗ್ರತೆ ವಹಿಸುವುದರಿಂದ ಅಧಿಕ ಲಾಭ ಸಂಭವ. ವಿದ್ಯೆ ಜ್ಞಾನ ಗುರುಹಿರಿಯರಿಂದ ಅನುಕೂಲಕರ ಪರಿಸ್ಥಿತಿ.

Advertisement

ಕನ್ಯಾ: ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಸಂಸಾರದಲ್ಲಿ ನೆಮ್ಮದಿ. ಮಕ್ಕಳಿಂದ ಸಂತೋಷ ವಾರ್ತೆ. ಧಾರ್ಮಿಕ ವಿಚಾರಗಳಲ್ಲಿ ಶಕ್ತಿ ವೃದ್ಧಿ. ಗೃಹೋಪಯೋಗ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ತುಲಾ: ಆರೋಗ್ಯ ವೃದ್ಧಿ. ಅತೀ ಆಸೆ ಮಾಡದೇ ಬಂದ ಅವಕಾಶ ಉಪಯೋಗಿಸಿಕೊಳ್ಳಿ. ಉತ್ತಮ ಜನ ಮನ್ನಣೆ. ನಿರೀಕ್ಷೆಗಿಂತಲೂ ಅಧಿಕ ಧನಾರ್ಜನೆ. ನಿರೀಕ್ಷಿಸಿದ ಕಾರ್ಯ ಸಾಧಿಸಿದ ಸಮಾಧಾನ. ವಿದ್ಯಾರ್ಥಿಗಳಿಗೆ ಶುಭ ಫ‌ಲದ ದಿನ.

ವೃಶ್ಚಿಕ: ರಾಜಕೀಯ ನಾಯಕರಿಗೆ ಉತ್ತಮ ಜನಮನ್ನಣೆ. ಹೆಚ್ಚಿನ ಜವಾಬ್ದಾರಿ ಸಿಗುವ ಅವಕಾಶ. ನೂತನ ಮಿತ್ರರ ಸಮಾಗಮ. ಬಂಧುಗಳಿಂದ ಪ್ರೋತ್ಸಾಹ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.

ಧನು: ಪಾಲುಗಾರಿಕಾ ವ್ಯವಹಾರಸ್ಥರೂ, ದಂಪತಿಗಳು ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಪ್ರಯಾಣ ಅವಕಾಶ. ಸ್ಥಾನಮಾನದ ಕೊರತೆ ಕಾಣದು. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯ ಉತ್ತಮ.

ಮಕರ: ಪರದೇಶದ ಕಾರ್ಯಗಳಲ್ಲಿ ನಿರೀಕ್ಷಿತ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಿತ್ರರಲ್ಲಿ, ಮಕ್ಕಳಲ್ಲಿ ತಾಳ್ಮೆಯಿಂದ ವರ್ತಿಸಿ. ಆಹಾರೋದ್ಯಮ, ಆಭರಣ, ವಸ್ತ್ರ ವ್ಯವಹಾರಸ್ಥರಿಗೆ ನಿರೀಕ್ಷಿತ ಲಾಭ

ಕುಂಭ: ಅನ್ಯರ ಸಹಾಯ ನಿರೀಕ್ಷಿಸದೆ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಗುರಿ ಸಾಧಿಸಿರಿ. ಧನಾರ್ಜನೆಗೆ ಅನುಕೂಲಕರ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಯಶಸ್ಸು. ಗಣಿ, ಭೂವ್ಯವಹಾರ, ಆಹಾರೋದ್ಯಮದವರಿಗೆ ಅನುಕೂಲ.

ಮೀನ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ದೇಶ ವಿದೇಶದ ವಿದ್ಯಾಲಯದಲ್ಲಿ ಅವಕಾಶ. ದೀರ್ಘ‌ ಪ್ರಯಾಣದಿಂದ ಲಾಭ. ರಾಜಕೀಯ ಕಾರ್ಯ ಕ್ಷೇತ್ರದಲ್ಲಿ ರಹಸ್ಯ ವ್ಯವಹಾರದಿಂದ ನಿರೀಕ್ಷಿತ ಸಾಧನೆ. ಅಭಿವೃದ್ಧಿದಾಯಕ ಧನಾರ್ಜನೆ.

Advertisement

Udayavani is now on Telegram. Click here to join our channel and stay updated with the latest news.

Next