Advertisement

ರಾಶಿ ಫಲ: ಅಭಿವೃದ್ಧಿದಾಯಕ ಬದಲಾವಣೆ, ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ

07:20 AM Mar 21, 2023 | Team Udayavani |

ಮೇಷ: ಆರೋಗ್ಯ ಗಮನಿಸಿ. ಎಲ್ಲಾ ವಿಚಾರಗಳಲ್ಲಿ ಎಚ್ಚರಿಕೆಯಿಂದ ತಾಳ್ಮೆಯಿಂದ ವ್ಯವಹರಿಸಿ. ಹಲವಾರು ಸ್ಪರ್ಧಿಗಳು ಎದುರಾದರು. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ತೋರುವುದರಿಂದ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ.

Advertisement

ವೃಷಭ: ಸರಿಯಾದ ನಿಯಮ ಪಾಲಿಸುವುದ ರಿಂದ ದೇಹಾರೋಗ್ಯ ಉತ್ತಮ. ದೀರ್ಘ‌ ಸಂಚಾರ ಸಂಭವ. ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡ ದಿರಿ. ಗೃಹ, ವಾಹನಾದಿ ಸುಖ. ಮಕ್ಕಳಿಂದ ಸಂತೋಷ ವೃದ್ಧಿ. ಗುರುಹಿರಿಯರ ಸಹಾಯ ಸಹಕಾರ ಪ್ರಾಪ್ತಿ.

ಮಿಥುನ: ಕೆಲಸಕಾರ್ಯಗಳಲ್ಲಿ ಚುರುಕುತನ ನೈಪುಣ್ಯತೆ ಉದಾರ ಮನೋಭಾವನೆ, ಧೈರ್ಯ ಉತ್ಸಾಹ ತೋರಿತು. ಅಭಿವೃದ್ಧಿದಾಯಕ ಬದಲಾವಣೆ. ಧಾರ್ಮಿಕ ಕಾರ್ಯಗಳ ನೇತೃತ್ವ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ.

ಕರ್ಕ: ಹಿರಿಯರಿಂದ ಸುಖ. ಸ್ಥಾನ ಸುಖಕ್ಕಾಗಿ ಹೆಚ್ಚಿದ ಪರಿಶ್ರಮ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಬದಲಾವಣೆ. ಗೃಹ, ಆಸ್ತಿ ವಿಚಾರದಲ್ಲಿ ಪ್ರಗತಿಯದಾಯಕ ಮುನ್ನಡೆ. ಉತ್ತಮ ಆರೋಗ್ಯ. ಸಂಸಾರದಲ್ಲಿ ನೆಮ್ಮದಿ.

ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿತ ಧನಲಾಭ ಪ್ರಾಪ್ತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗುರುಹಿರಿಯರೊಂದಿಗೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಕಲ್ಪಿಸದಿರಿ. ಆಸ್ತಿ ವಿಚಾರಗಳಲ್ಲಿ ಸಾಮಾನ್ಯ ಫ‌ಲ.

Advertisement

ಕನ್ಯಾ: ಆರೋಗ್ಯ ಗಮನಿಸಿ. ದೀರ್ಘ‌ ಸಂಚಾರ ಸಂಭವ. ಆಹಾರ ಸೇವನೆಯಲ್ಲಿ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ ಸಂಭವ. ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಮನೆಯಲ್ಲಿ ಸಂತಸದ ವಾತಾವರಣ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನತೆ ಪ್ರವೃತ್ತಿ ಸಲ್ಲದು. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ.

ಧನು: ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ಸಾಂಸಾರಿಕ ಸುಖ ಮಧ್ಯಮ. ವಿದ್ಯಾರ್ಥಿಗಳು ಪರರ ಸಹಾಯ ಪಡೆದು ನಿರೀಕ್ಷಿತ ಗುರಿ ಸಾಧಿಸಿರಿ.

ಮಕರ: ಆರೋಗ್ಯದಲ್ಲಿ ಸುಧಾರಣೆ. ದೂರದ ವ್ಯವಹಾರಗಳಿಂದ ಉತ್ತಮ ಧನಾರ್ಜನೆ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳ ಬಗ್ಗೆ ಹೆಚ್ಚಿದ ಗಮನ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗುವ ಸಮಯ.

ಕುಂಭ: ದೀರ್ಘ‌ ಪ್ರಯಾಣದಲ್ಲಿ ನಿರೀಕ್ಷಿತ ಸಫ‌ಲತೆ. ಉತ್ತಮ ಸ್ಥಾನ, ಗೌರವಾದಿ ಲಭ್ಯ. ಅಧಿಕ ಧನಾರ್ಜನೆ. ನೂತನ ಮಿತ್ರರ ಭೇಟಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ.

ಮೀನ: ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ದಾಖಲಾತಿಯೊಂದಿಗೆ ವ್ಯವಹರಿಸಿ. ದೂರದ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫ‌ಲ. ಗುರುಹಿರಿಯರ ಆರೋಗ್ಯದ ಕಡೆ ಗಮನಹರಿಸಿ.

Advertisement

Udayavani is now on Telegram. Click here to join our channel and stay updated with the latest news.

Next