Advertisement

ರಾಶಿ ಫಲ: ದೂರದ ವ್ಯವಹಾರಗಳಲ್ಲಿ ಪ್ರಗತಿ, ಅವಿವಾಹಿತರಿಗೆ ವಿವಾಹ ಭಾಗ್ಯ

07:17 AM Mar 07, 2023 | Team Udayavani |

ಮೇಷ: ಆರೋಗ್ಯ ಸುದೃಢ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಘನತೆ ಗೌರವ ಮಾನ್ಯತೆ. ಕೀರ್ತಿ ಸಂಪಾದನೆ. ಅಧಿಕ ಧನಲಾಭ. ಅಧಿಕಾರಯುತ ಕಾರ್ಯಾಚರಣೆ. ನೂತನ ವ್ಯವಹಾರ ಆರಂಭ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ.

Advertisement

ವೃಷಭ: ಪೂರ್ವಾಪರ ತಿಳಿದು ಪರರಿಗೆ ಸಹಾಯ ಮಾಡಿ. ವಿಶ್ವಾಸ ಘಾತುಕ ಪರಿಸ್ಥಿತಿ ಎದುರಾಗುವ ಸಾಧ್ಯತೆ ಸಂಭವ. ವಂಚನೆ ಭೀತಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಸಣ್ಣ ಪ್ರಯಾಣ. ಆರೋಗ್ಯ ವೃದ್ಧಿ.

ಮಿಥುನ: ವಿದ್ಯಾರ್ಜನೆಯಲ್ಲಿ ಆಸಕ್ತಿ. ಅಧ್ಯಯನ ಅಧ್ಯಾಪನದಿಂದ ಮಾನ್ಯತೆ. ಮಕ್ಕಳಿಂದ ಸಂತೋಷ. ದೂರದ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಗೃಹದಲ್ಲಿ ಸಂಭ್ರಮದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ.

ಕರ್ಕ: ಸಣ್ಣ ಪ್ರಯಾಣ. ನಿರೀಕ್ಷಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ. ಪಾಲುದಾರರಿಂದ ಸಹಕಾರ. ಸಹೋದ್ಯೋಗಿಗಳ ಪ್ರೋತ್ಸಾಹ. ಉನ್ನತ ವ್ಯಾಸಂಗದಲ್ಲಿ ಪಾಲ್ಗೊಳ್ಳುವಿಕೆ. ಸಾಮಾನ್ಯ ಧನ ಲಾಭ.

ಸಿಂಹ: ಸಾಂಸಾರಿಕ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಅಧಿಕ ಧನವ್ಯಯ ಸಂಭವ. ಗುರುಹಿರಿಯರ ಮಾರ್ಗದರ್ಶನ ಅಗತ್ಯ. ಹೂಡಿಕೆಗಳಲ್ಲಿ ಎಚ್ಚರಿಕೆ ಅಗತ್ಯ. ಹಿರಿಯರಿ ಆರೋಗ್ಯ ಗಮನಿಸಿ.

Advertisement

ಕನ್ಯಾ: ಹೆಚ್ಚಿದ ವರಮಾನ. ಸಂದಭೋìಚಿತ ಮಾತುಗಾರಿಕೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ದೂರದ ಬಂಧುಮಿತ್ರರ ಸಹಕಾರ, ಪ್ರೋತ್ಸಾಹ. ದಾಂಪತ್ಯ ತೃಪ್ತಿದಾಯಕ. ಆರೋಗ್ಯ ಸುಧಾರಣೆ. ಮಕ್ಕಳ ವಿಚಾರದಲ್ಲಿ ಜಾಗ್ರತೆ ವಹಿಸಿ.

ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ: ಧೈರ್ಯ, ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವ ರಿಂದಲೂ ಸಹೋದ್ಯೋಗಿಗಳಿಂದಲೂ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಉದ್ಯೋಗ ಹೆಚ್ಚಿನ ಗೌರವ.

ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನಮಾನ.

ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ್ದರಿಂದ ಮನಃತೃಪ್ತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಾಮಾನ್ಯ ಪ್ರಗತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂಭ್ರಮದ ವಾತಾವರಣ.

ಕುಂಭ: ದೂರ ಪ್ರಯಾಣ. ಆಸ್ತಿ ವಿಚಾರಗಳಲ್ಲಿ ಹೂಡಿಕೆ ಪ್ರಗತಿ. ಉತ್ತಮ ಧನ ಸಂಪಾದನೆ. ಸಂದರ್ಭಕ್ಕೆ ಸರಿಯಾಗಿ ವಾಕ್‌ಚತುರತೆ ಪ್ರದರ್ಶನ. ಸಹೋದರ ಸಮಾನರಿಂದ ಸಹಾಯ ಸಹಕಾರ ಲಭ್ಯ. ಮಕ್ಕಳಿಂದ ಸಂತೋಷ ವೃದ್ಧಿ.

ಮೀನ: ಆರೋಗ್ಯ ಸುದೃಢ. ಸಮಾಜಮುಖೀ ಕೆಲಸ ಕಾರ್ಯಗಳಲ್ಲಿ ಭಾಗಿಯಾದ ಸಂತಸ. ಜನಮನ್ನಣೆ. ವಾಹನಾದಿ ಸೌಕರ್ಯ ಪ್ರಾಪ್ತಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾಕಾರ್ಯಗಳನ್ನು ನೆರವೇರಿಸಿದ ತೃಪ್ತಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಿ.

Advertisement

Udayavani is now on Telegram. Click here to join our channel and stay updated with the latest news.

Next