Advertisement

Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

07:26 AM May 16, 2024 | Team Udayavani |

ಮೇಷ: ಉದ್ಯೋಗದಲ್ಲಿ ವಿಭಾಗ ಬದಲಾವಣೆ. ವ್ಯವಹಾರದಲ್ಲಿ ವಿಶೇಷ ಯಶಸ್ಸು. ಸರಕಾರಿ ಉದ್ಯೋಗಸ್ಥರ ಸ್ಥಿತಿಗತಿಗಳಲ್ಲಿ ವ್ಯತ್ಯಾಸ ಇಲ್ಲ. ದೀರ್ಘಾವಧಿ ಹೂಡಿಕೆಗಳಲ್ಲಿ ಲಾಭ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಸಣ್ಣ ಪ್ರಯಾಣ ಸಂಭವ.

Advertisement

ವೃಷಭ: ಯೋಜನೆಗಳ ಅನುಷ್ಠಾನಕ್ಕೆ ಪ್ರಮುಖರ ಸಹಕಾರ. ಉದ್ಯೋಗಸ್ಥರೆದುರು ವಿಶಿಷ್ಟ ಅವಕಾಶಗಳು. ಖಾದಿಯ ಸಿದ್ಧ ಉಡುಪುಗಳು ಉದ್ಯಮಕ್ಕೆ ಲಾಭ. ವೃತ್ತಿಪರಿಣತರಿಗೆ ಖಾಸಗಿ ಕ್ಷೇತ್ರ ದಲ್ಲಿ ಉದ್ಯೋಗಾವಕಾಶ.

ಮಿಥುನ: ಯೋಜನೆಗಳನ್ನು ಕಾರ್ಯಗತ ಗೊಳಿಸುವ ಪ್ರಯತ್ನ. ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ. ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಸಣ್ಣ ಪ್ರಯಾಣ ಸಂಭವ.

ಕರ್ಕಾಟಕ: ಉದ್ಯೋಗಸ್ಥರಿಗೆ ವೇತನ ಏರಿಕೆ ಯಲ್ಲಿ ವಿಳಂಬ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ಮಧ್ಯವರ್ತಿಗಳ ಅಡ್ಡಿ. ಸರಕಾರಿ ಸೌಲಭ್ಯಗಳನ್ನು ದೊರಕಿಸುವ ಪ್ರಯತ್ನ.ಮಹಿಳೆಯರ ಸೊÌàದ್ಯೋಗ ಯೋಜನೆ ಉತ್ಪನ್ನಗಳಿಗೆ ಕೀರ್ತಿ.

ಸಿಂಹ: ಏಕಕಾಲದಲ್ಲಿ ಹಲವು ವ್ಯವಹಾರಗಳತ್ತ ಗಮನ ಹರಿಸಲು ಒತ್ತಡ. ಉದ್ಯೋಗಸ್ಥರಿಗೆ ಲಾಭ ನೀಡದ ಪದೋನ್ನತಿ. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಆರಂಭ. ಪರಿಣತರ ಸಲಹೆಯಂತೆ ಹೊಸ ಕ್ರಮಗಳು.

Advertisement

ಕನ್ಯಾ: ಉದ್ಯೋಗಸ್ಥರಿಗೆ ಅನುಕೂಲದ ವಾತಾವರಣ. ಸಂಸ್ಥೆಯ ಪ್ರಮುಖರಿಂದ ನೌಕರರಿಗೆ ಪುರಸ್ಕಾರ. ಹಿರಿಯರ ಆಸ್ತಿಗೆ ಶಾಶ್ವತ ನೀರಾವರಿ ವ್ಯವಸ್ಥೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ.

ತುಲಾ: ಶರೀರಕ್ಕಾದ ಬಾಧೆಯಿಂದ ಚೇತರಿಕೆ. ಉದ್ಯೋಗಸ್ಥರ ಪಾಲಿಗೆ ನಿಲ್ಲದ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಯಾವುದೇ ಹಾನಿ ಯಾಗದು. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಂಸಾರದಲ್ಲಿ ವಿರಸ ಬೆಳೆಸಲು ಕುಹಕಿಗಳ ಯತ್ನ.

ಧನು: ಪಟ್ಟು ಬಿಡದ ಪ್ರಯತ್ನದಿಂದ ಕಾರ್ಯ ಸುಧಾರಣೆ. ಉದ್ಯಮದ ವೈವಿಧಿÂàಕರಣ ಯೋಜನೆ ಅನುಷ್ಠಾನದ ಹಂತದಲ್ಲಿ. ಹಿರಿಯ ನಾಗರಿಕ ರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.ಮಕ್ಕಳ ಅಧ್ಯಯನಾಸಕ್ತಿ ಹಾಗೂ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ.

ಮಕರ: ಏಳೂವರೆ ಶನಿಯ ಕೊನೆಯ ಹಂತದಲ್ಲಿ ಎಲ್ಲವೂ ಶುಭ. ಉದ್ಯೋಗಸ್ಥರ ಸಾಮರ್ಥ್ಯ ಪರೀಕ್ಷೆಯ ಸನ್ನಿವೇಶ. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ.

ಕುಂಭ: ಸಪ್ತಾಹ ಮುಂದುವರಿಯುತ್ತಿದ್ದಂತೆ ಸರಾಗವಾಗಿ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ. ಶೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ. ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ. ಕೃಷ್ಯುತ್ಪಾದನೆ ವೃದ್ಧಿಯಲ್ಲಿ ಯಶಸ್ಸು.

ಮೀನ: ಅಷ್ಟೊಂದು ಪ್ರೋತ್ಸಾಹಕ ವಾತಾವರಣ ಇಲ್ಲವಾದರೂ ಕಾರ್ಯದಲ್ಲಿ ಯಶಸ್ಸು. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ. ನಿಲ್ಲಿಸಿದ್ದ ಉದ್ಯಮ ಮತ್ತೆ ಪ್ರಾರಂಭ. ಸಾಮೂಹಿಕ ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ

Advertisement

Udayavani is now on Telegram. Click here to join our channel and stay updated with the latest news.

Next