Advertisement

Daily Horoscope: ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ, ಅವಿವಾಹಿತರಿಗೆ ವಿವಾಹ ಭಾಗ್ಯ

07:21 AM May 18, 2023 | Team Udayavani |

ಮೇಷ: ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಅಪೇಕ್ಷಿಸಿದಂತೆ ಧನಾರ್ಜನೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ಅಭಿವೃದ್ಧಿಗಾಗಿ ಧನವ್ಯಯ ಸಂಭವ. ಅವಿವಾಹಿತರಿಗೆ ವಿವಾಹ ಭಾಗ್ಯ.

Advertisement

ವೃಷಭ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ. ಸಾಂಸಾರಿಕವಾಗಿ ನೆಮ್ಮದಿಯ ದಿನ.

ಮಿಥುನ: ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಹೋದರ ಸಮಾನರಿಂದ ಸಂದರ್ಭೋಚಿತ ಸಹಾಯ ಸಂಭವ. ಗೃಹದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ತೋರಬಹುದು.

ಕರ್ಕ: ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.

ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿಸಿದ ಸ್ಥಾನಮಾನ ಲಭ್ಯ.

Advertisement

ಕನ್ಯಾ: ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ. ದೂರ ಪ್ರಯಾಣ ಸಂಭವ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಹಠಮಾರಿತನ ಸಲ್ಲದು. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ಪ್ರಗತಿ. ಅನಗತ್ಯ ಹಣಕಾಸಿನ ಖರ್ಚಿಗೆ ಆಸ್ಪದ ನೀಡದಿರಿ.

ವೃಶ್ಚಿಕ: ಗೃಹದಲ್ಲಿ ಅತಿಥಿಗಳ ಆಗಮನದಿಂದ ಸಂತಸ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉತ್ತಮ ಧನವೃದ್ಧಿ. ಮಿತ್ರರಿಂದ ಲಾಭ. ಮನೋರಂಜನೆಯ ದಿನ.

ಧನು: ಉತ್ತಮ ಧನಾಗಮನ. ದೂರ ಪ್ರಯಾಣ. ಧಾರ್ಮಿಕ ಸ್ಥಳ ಸಂದರ್ಶನದಿಂದ ಮನಃಸಂತೋಷ. ಗುರುಹಿರಿಯರಿಂದ ಪ್ರೋತ್ಸಾಹ. ಮಕ್ಕಳ ನಿಮಿತ್ತ ಹೆಚ್ಚಿದ ಪರಿಶ್ರಮ. ಆರೋಗ್ಯದ ಕಡೆ ಗಮನಹರಿಸಿ. ಮಿತ್ರರಿಂದ ಸಹಾಯ.

ಮಕರ: ದೂರ ಪ್ರಯಾಣ. ದೂರದ ಊರು ಗಳಲ್ಲಿ ಉಳಿತಾಯದ ಆಲೋಚನೆ. ಕುಟುಂಬ ಸಮೇತರಾಗಿ ಸಮಾರಂಭಗಳಲ್ಲಿ ಪಾಲ್ಗೊಳ್ಳು ವಿಕೆಯಿಂದ ಸಂತಸ. ಗುರುಹಿರಿಯರಿಂದ ಸಂದರ್ಭಕ್ಕೆ ಸರಿಯಾದ ಮಾರ್ಗದರ್ಶನ.

ಕುಂಭ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ತಾಯಿ ಸಮಾನ ವರ್ಗದವರಿಂದ ಪ್ರೋತ್ಸಾಹ. ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ವ್ಯವಹಾರದಲ್ಲಿ ಪ್ರಗತಿ. ಸೇವಕ ವರ್ಗದವರಿಗೆ ಲಾಭ. ದಾಂಪತ್ಯ ತೃಪ್ತಿಕರ.

ಮೀನ: ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಸಂಪಾದನೆ. ಜನಮನ್ನಣೆ ಪ್ರಾಪ್ತಿ. ನಿರೀಕ್ಷಿಸಿದಂತೆ ಸಹಾಯ. ದಂಪತಿಗಳು ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಸಂತೋಷ. ಆಹಾರೋದ್ಯಮ, ವಸ್ತ್ರೋದ್ಯಮ, ಆಭರಣೋದ್ಯಮದವರಿಗೆ‌ ಲಾಭ.

Advertisement

Udayavani is now on Telegram. Click here to join our channel and stay updated with the latest news.

Next