Advertisement

Daily Horoscope: ಉದ್ಯೋಗ ಅರಸುತ್ತಿರುವವರಿಗೆ ಶುಭ ಸೂಚನೆ, ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸ

07:27 AM May 31, 2024 | Team Udayavani |

ಮೇಷ: ಉದ್ಯಮಿಗಳಿಂದ ಸಮಗ್ರ ಸುಧಾರಣೆಯ ಬಗ್ಗೆ ಚಿಂತನೆ. ಉದ್ಯೋಗ ಸ್ಥಾನದಲ್ಲಿ ಸ್ಥಿರ ಅನುಭವ. ಪುತ್ರನ ವಿವಾಹ ಸಮಸ್ಯೆಗೆ ಪರಿಹಾರ. ವ್ಯವಹಾರ ಸಂಬಂಧ ತಿರುಗಾಟ. ಹಿರಿಯರು ಮತ್ತು ಗೃಹಿಣಿಯರಿಗೆ ಉಲ್ಲಾಸ.

Advertisement

ವೃಷಭ: ವಧೂ- ವರಾನ್ವೇಷಿಗಳಿಗೆ ಶುಭವಾರ್ತೆ. ಮಕ್ಕಳ ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸ. ವ್ಯಾಪಾರಿಗಳು, ಎಂಜಿನಿಯರ್‌, ಲೆಕ್ಕ ಪರಿಶೋಧಕರು ಮೊದಲಾದ ವೃತ್ತಿಪರರಿಗೆ ಕೆಲಸ ಮುಗಿಸುವ ತರಾತುರಿ.

ಮಿಥುನ: ಉದ್ಯೋಗ ಅರಸುತ್ತಿರುವವರಿಗೆ ಶುಭ ಸೂಚನೆ. ಸ್ವತಂತ್ರ ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ. ಗ್ರಂಥಾಧ್ಯಯನಯಲ್ಲಿ ಆಸಕ್ತಿ. ಸಂಗೀತ ಶ್ರವಣ, ಸತ್ಸಂಗಗಳಲ್ಲಿ ಕಾಲಯಾಪನೆ. ವ್ಯವಹಾರ ಸಂಬಂಧ ಪೂರ್ವ ದಿಕ್ಕಿಗೆ ಪ್ರಯಾಣ.

ಕರ್ಕಾಟಕ: ಮಿಶ್ರಫ‌ಲಗಳ ದಿನ. ಹಿರಿಯರ ಯೋಗಕ್ಷೇಮ ವಿಚಾರಿಸುತ್ತಿರಿ. ಮನೆಯಲ್ಲಿ ಉಳಿದ ಎಲ್ಲರ ಆರೋಗ್ಯ ಉತ್ತಮ. ಮಕ್ಕಳ ಭವಿಷ್ಯ ಚಿಂತನೆ. ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ.

ಸಿಂಹ: ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸಿನ ಅನುಭವ. ಷೇರು ವ್ಯವಹಾರದಲ್ಲಿ ಉತ್ತಮ ಲಾಭ. ಅಧಿಕಾರಿಗಳ ಸಕಾಲಿಕ ಸ್ಪಂದನದಿಂದ ಕಾರ್ಯಗಳು ಶೀಘ್ರವಾಗಿ ಮುಕ್ತಾಯ. ಯಂತ್ರೋಪಕರಣ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ.

Advertisement

ಕನ್ಯಾ: ಸೇವಾಕಾರ್ಯಗಳಿಂದ ಹೆಚ್ಚಿದ ಜನಪ್ರಿಯತೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ಸಂಸಾರ ಸುಖ ತೃಪ್ತಿಕರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ.

ತುಲಾ: ಪರಿಸರ ಸ್ವತ್ಛತೆ ಚಟುವಟಿಕೆಗಳಲ್ಲಿ ಆಸಕ್ತಿ. ಧಾರ್ಮಿಕ ಕ್ರಿಯೆಗಳನ್ನು ದರ್ಶಿಸುವ ಅವಕಾಶ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾ ರಿಗಳಿಗೆ ಲಾಭ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂಭ್ರಮದ ದಿನ.

ವೃಶ್ಚಿಕ: ನೊಂದವರಿಗೆ ಸಾಂತ್ವನ ಹೇಳಿ ಸಮಾಧಾನ ಹೊಂದುವಿರಿ. ವಸ್ತ, ಅಲಂಕಾರ ಸಾಮಗ್ರಿ ಖರೀದಿ ಸಂಭವ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯ ಸುಧಾರಣೆ.

ಧನು: ಸರಕಾರಿ ಉದ್ಯೋಗಸ್ಥರಿಗೆ ಶುಭ ಸಮಾ ಚಾರ ನಿರೀಕ್ಷೆ. ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ. ಪಾರದರ್ಶಕವಾದ ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಭೂವ್ಯವಹಾರ ಸಂಬಂಧ ಪ್ರಯಾಣ.

ಮಕರ: ಆದಾಯ ವೃದ್ಧಿಯ ಪ್ರಯತ್ನವು ಫ‌ಲಿಸುವ ಕಾಲ ಸನ್ನಿಹಿತ. ಕಾರ್ಯರಂಗದಲ್ಲಿ ಸಹನೆಗೆ ದಕ್ಷತೆಯಷ್ಟೇ ಪ್ರಾಧಾನ್ಯ. ಮಕ್ಕಳ ಭವಿಷ್ಯ ಚಿಂತನೆ.ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಶಸ್ತ್ರವೈದ್ಯರಿಗೆ ಕೀರ್ತಿ.

ಕುಂಭ: ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಸಮಾಜ ಸೇವೆಯ ಕಾರಣದಿಂದ ಜನಪ್ರಿಯತೆ ವರ್ಧನೆ. ಸ್ಥಿರಾಸ್ತಿ ಖರೀದಿ ಪ್ರಯತ್ನ ಫ‌ಲಪ್ರದ.ಸ್ಟೇಶನರಿ ವ್ಯಾಪಾರಿಗಳಿಗೆ ಲಾಭ. ಮನೆಯಲ್ಲಿ ದೇವತಾ ಕಾರ್ಯ ಆಯೋಜನೆ.

ಮೀನ: ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವ ಅವಕಾಶ. ಕಳೆದು ಹೋದ ಸುಸಂದರ್ಭ ಮರಳಿ ಬರುವ ಸಾಧ್ಯತೆ. ಕಾರ್ಯ ಯಶಸ್ಸಿಗೆ ಸಂಬಂಧಪಟ್ಟವರ ಸಹಕಾರ. ಧಾರ್ಮಿಕ ಸಂಸ್ಥೆಯ ಹೊಣೆಗಾರಿಕೆ ಮರಳಿ ಬರುವ ನಿರೀಕ್ಷೆ. ದ್ರವ್ಯ ವ್ಯಾಪಾರಿಗಳಿಗೆ ಶುಭಕಾಲ.

Advertisement

Udayavani is now on Telegram. Click here to join our channel and stay updated with the latest news.

Next