Advertisement

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

07:20 AM May 09, 2024 | Team Udayavani |

ಮೇಷ: ನಿಮ್ಮ ಪ್ರಾರ್ಥನೆ, ಭಗವಂತನ ಇಚ್ಛೆ, ಒಂದೇ ಆಗಿದ್ದಾಗ ಎಲ್ಲವೂ ಸುಲಭ. ಉದ್ಯೋಗ ಸ್ಥಾನದಲ್ಲಿ ನಿಶ್ಚಿಂತೆಯ ಪರಿಸ್ಥಿತಿ. ಮನೆಯವರ ಆರೋಗ್ಯ ಉತ್ತಮ. ಉದ್ಯಮ, ವ್ಯವಹಾರದಲ್ಲಿ ಉತ್ತಮ ಲಾಭ.

Advertisement

ವೃಷಭ: ಇಂದು ಇಷ್ಟಾರ್ಥಸಿದ್ಧಿಯ ದಿನವೆನ್ನಬಹುದು. ನಿರೀಕ್ಷಿತ ಪದೋನ್ನತಿ ಸಂಭವ. ಸರಕಾರಿ ಅಧಿಕಾರಿಗಳಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆ. ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆ . ಕೃಷ್ಯುತ್ಪನ್ನಗಳಿಗೆ ಲಾಭದಾಯಕ ಬೆಲೆ.

ಮಿಥುನ: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ. ಹೊಸ ಸಹೋದ್ಯೋಗಿಗಳಿಗೆ ಜವಾಬ್ದಾರಿ ಹಂಚಿಕೆ. ಪಿತ್ರಾರ್ಜಿತ ಆಸ್ತಿಯನ್ನು ಉಳಿಸಿಕೊಳ್ಳುವ ಪ್ರಯತ್ನ ಸಫ‌ಲ. ದೇವತಾರ್ಚನೆ, ಧ್ಯಾನ, ಸತ್ಸಂಗದಲ್ಲಿ ಆಸಕ್ತಿ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಸತತ ಪರಿಶ್ರಮಕ್ಕೆ ಗೌರವ. ಉದ್ಯಮಕ್ಕೆ ಎದುರಾ ಗಿದ್ದ ಕಾನೂನು ಸಮಸ್ಯೆ ನಿವಾರಣೆ. ನೌಕರರ ಯೋಗಕ್ಷೇಮಕ್ಕೆ ಯೋಜನೆ. ಖಾದಿ, ಗ್ರಾಮೋದ್ಯೋಗ ಬೆಳೆಸಲು ಆಸಕ್ತಿ.

ಸಿಂಹ: ಉದ್ಯಮದ ಉತ್ಪನ್ನಗಳಿಗೆ ಹೊರಗಿ ನಿಂದ ಬೇಡಿಕೆ ಹೆಚ್ಚಳ. ಉತ್ತರದ ಕಡೆಯಿಂದ ಪ್ರೋತ್ಸಾಹಕರ ವಾರ್ತೆ. ಮಹಿಳೆಯರ ಗೃಹೋದ್ಯಮ ಯಶಸ್ಸಿನತ್ತ ಮುನ್ನಡೆ. ವ್ಯವಹಾರದ ಸಮಗ್ರ ಸುಧಾರಣೆಗೆ ಕಾರ್ಯಯೋಜನೆ.

Advertisement

ಕನ್ಯಾ: ಸರಕಾರಿ ಉದ್ಯೋಗಿಗಳಿಗೆ ಕೊಂಚ ಆತಂಕ. ಎಲೆಕ್ಟ್ರಾನಿಕ್ಸ್‌ ಉದ್ಯಮಗಳಿಗೆ ಅಧಿಕ ಬೇಡಿಕೆ. ವಯಸ್ಸು ಮೀರುವ ಭೀತಿಯಲ್ಲಿರುವ ಅವಿವಾಹಿತರಿಗೆ ಶೀಘ್ರ ವಿವಾಹ ನಿಶ್ಚಯ. ವೃತ್ತಿ ಪರಿಣತಿ ವೃದ್ಧಿಗೆ ಪ್ರಯತ್ನ.

ತುಲಾ: ಅದೃಷ್ಟ ಒಲಿಯುವ ಸಮಯ ಸನ್ನಿಹಿತ. ಮನೋಬಲ ವೃದ್ಧಿಗೆ ಸಾಧನೆ ಮುಂದುವರಿಕೆ. ವೃತ್ತಿ ಪರಿಣತಿ ವೃದ್ಧಿಗೆ ಹಳಬರ ಮಾರ್ಗದರ್ಶನ. ಉದ್ಯೋಗ ಸ್ಥಾನಕ್ಕೆ ಗಣ್ಯ ವ್ಯಕ್ತಿಗಳ ಭೇಟಿ. ಹತ್ತಿರದ ದೇವಾಲಯಕ್ಕೆ ಸಂದರ್ಶನ.

ವೃಶ್ಚಿಕ: ಬದಲಾಗುವ ಬದುಕಿಗೆ ಹೊಂದಿ ಕೊಳ್ಳುವ ಅನಿವಾರ್ಯತೆ. ಉದ್ಯಮ ಸ್ಥಾನ ದಲ್ಲಿ ಹೊಸ ವ್ಯವಸ್ಥೆಯೊಂದಿಗೆ ನಿಧಾನಗತಿಯಲ್ಲಿ ಪ್ರಗತಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಪ್ರಗತಿ. ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ.

ಧನು: ಉದ್ಯೋಗದಲ್ಲಿ ಯೋಗ್ಯತೆಗೆ ಸರಿ ಯಾದ ಸ್ಥಾನ ಲಭ್ಯ. ಸಣ್ಣ ಪ್ರಮಾಣದ ಗೃಹೋದ್ಯಮ ಆರಂಭ. ಸ್ವಂತ ಮನೆ ಹೊಂದುವ ಹಂಬಲ ಈಡೇರುವ ಭರವಸೆ. ಊರಿನ ದೇವಾಲಯಕ್ಕೆ ಸಂದರ್ಶನ.

ಮಕರ: ಇಮ್ಮಡಿ ಉತ್ಸಾಹದೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ ನಿರ್ವಹಣೆ ಆರಂಭ. ಉದ್ಯಮಕ್ಕೆ ಸೇರ್ಪಡೆಯಾದ ಹೊಸ ನೌಕರರಿಗೆ ಆನಂದ. ಸಹೋದ್ಯಮದ ಸಂಸ್ಥೆಯ ಉತ್ಪಾದನೆ ವೃದ್ಧಿ.

ಕುಂಭ: ಸತ್ಕರ್ಮಗಳಿಂದ ಪುಣ್ಯಸಂಪತ್ತು ವೃದ್ಧಿ. ಉದ್ಯೋಗಸ್ಥಾನದಲ್ಲಿ ಹೊಸಬರಿಗೆ ಮಾರ್ಗದರ್ಶನ. ಉದ್ಯಮದ ಉತ್ಪನ್ನಗಳ ವಿತರಣೆ ಜಾಲ ವೃದ್ಧಿ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ, ಶೋಕಿ ಸಾಮಗ್ರಿಗಳ ವಿತರಕರಿಗೆ ಬಿಡುವು ಇಲ್ಲದಷ್ಟು ಬೇಡಿಕೆ. ಬಂಧುಗಳ ಮನೆಯಲ್ಲಿ ಶುಭ ಸಮಾರಂಭ.

ಮೀನ: ಸಹೋದ್ಯೋಗಿಗಳಿಂದ ಸರ್ವವಿಧ ಸಹಾಯ. ಸರಕಾರಿ ಇಲಾಖೆಗಳವರಿಂದ ಸಕಾರಾತ್ಮಕ ಸ್ಪಂದನ. ಜನಸೇವಾ ಕಾರ್ಯಗಳು ಮುಂದುವರಿಕೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿನೂತನ ವ್ಯವಸ್ಥೆ.. ಮನೆಮಂದಿಯೆಲ್ಲರ ಆರೋಗ್ಯ ಉತ್ತಮ.

Advertisement

Udayavani is now on Telegram. Click here to join our channel and stay updated with the latest news.

Next