Advertisement

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

07:44 AM Oct 03, 2024 | Team Udayavani |

ಮೇಷ: ನವರಾತ್ರಿಯ ಆರಂಭದಲ್ಲಿ ಶುಭ ಸೂಚನೆಗಳು. ಉದ್ಯೋಗಸ್ಥರಿಗೆ ಆಹ್ಲಾದಕರ ಅನುಭವ. ಸಂದರ್ಭಕ್ಕೆ ಸರಿಯಾಗಿ ಸ್ಪಂದನ. ಸಣ್ಣ ಉದ್ಯಮಿಗಳಿಗೆ ಗಣನಾರ್ಹ ಯಶಸ್ಸು. ಮಹಿಳಾ ಉದ್ಯಮಿಗಳಿಗೆ ಕೀರ್ತಿಲಾಭ.

Advertisement

ವೃಷಭ: ಉದ್ಯೋಗಸ್ಥರಿಗೆ ಖಾತೆ ಬದಲಾವಣೆ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಕುಟುಂಬದಲ್ಲಿ ಸಾಮರಸ್ಯ ವೃದ್ಧಿ. ಹತ್ತಿರದ ದೇವಾಲಯಕ್ಕೆ ಭೇಟಿ.

ಮಿಥುನ: ಪರ್ವಕಾಲದಲ್ಲಿ ಹೊಸ ಯೋಜನೆಗಳು. ತಾತ್ಕಾಲಿಕ ನೌಕರರ ಕೆಲಸ ಖಾಯಂ. ಅನವಶ್ಯ ವೈಮನಸ್ಯಕ್ಕೆ ಎಡೆಗೊಡಬೇಡಿ. ಯುವಜನರಿಗೆ ವೃತ್ತಿಪರ ಶಿಕ್ಷಣದ ವ್ಯವಸ್ಥೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಕರ್ಕಾಟಕ: ಎಣಿಸಿದ್ದಕ್ಕಿಂತ ಸುಲಭವಾಗಿ ಕಾರ್ಯಸಾಧನೆ. ಉದ್ಯೋಗಸ್ಥರ ಸ್ಥಿತಿಯಲ್ಲಿ ವ್ಯತ್ಯಾಸ ಇಲ್ಲ. ಉದ್ಯಮಗಳ ಬೆಳವಣಿಗೆಗೆ. ಕಾನೂನು ಅಡ್ಡಿ. ಮಹಿಳೆಯರ ಸ್ವೋದ್ಯೋಗ ಯೋಜನೆ ಉತ್ಪನ್ನಗಳಿಗೆ ಕೀರ್ತಿ. ಮನೆಯಲ್ಲಿ ದೇವತಾರಾಧನೆಯ ಸಂಭ್ರಮ.

ಸಿಂಹ: ನಿರ್ವಹಿಸಲು ಕಷ್ಟವಾಗುವಷ್ಟು ವ್ಯವಹಾರಗಳು. ಉದ್ಯೋಗಸ್ಥರಿಗೆ ಆರ್ಥಿಕ ಲಾಭ ನೀಡದ ಪದೋನ್ನತಿ. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಆರಂಭ. ವಸ್ತ್ರ,ಆಭರಣ ವ್ಯಾಪಾರಿಗಳಿಗೆ ಸಂಭ್ರಮ. ಕುಟುಂಬದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

Advertisement

ಕನ್ಯಾ: ಉದ್ಯೋಗಸ್ಥರಿಗೆ ಪರಿಶ್ರಮದಿಂದ ಹೆಸರು. ಸಂಸ್ಥೆಯ ಪ್ರಮುಖರಿಂದ ಪುರಸ್ಕಾರ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ದೇವರ ದರ್ಶನಕ್ಕಾಗಿ ಉತ್ತರಕ್ಕೆ ಪ್ರಯಾಣ.

ತುಲಾ: ಶಾರೀರಿಕ ಬಾಧೆಯಿಂದ ಮುಕ್ತರಾಗಿದ್ದೀರಿ ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟದಿಂದ ಬಿಡುಗಡೆ. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ವಿವಾಹಾಸಕ್ತರಿಗೆ ಅನುರೂಪದ ಜೋಡಿ ಲಭ್ಯ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ವೃಶ್ಚಿಕ: ಉದ್ಯೋಗಸ್ಥರ ಹಿತಕ್ಕೆ ಹಾನಿಯಾಗದು. ಸರಕಾರಿ ಅಧಿಕಾರಿಗಳಿಗೆ ಅಪವಾದದ ಭೀತಿ. ರಾಜಕಾರಣಿಗಳ ನಡುವೆ ನಿಲ್ಲದ ಕೆಸರೆರಚಾಟ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಂಸಾರದಲ್ಲಿ ಸಾಮರಸ್ಯ, ಒಗ್ಗಟ್ಟಿಗೆ ಹಾನಿಯಿಲ್ಲ.

ಧನು: ಪಟ್ಟು ಬಿಡದ ಪ್ರಯತ್ನದಿಂದ ಕಾರ್ಯ ಸುಧಾರಣೆ. ಉದ್ಯಮದ ವೈವಿಧಿÂàಕರಣ ಯೋಜನೆ ಸಫ‌ಲ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.ಮಕ್ಕಳ ಪ್ರತಿಭೆ ವಿಕಸನಕ್ಕೆ ಉತ್ತೇಜನ. ಸಂಸಾರದಲ್ಲಿ ಸಾಮರಸ್ಯ, ಆರೋಗ್ಯ, ಆನಂದ.

ಮಕರ: ಉದ್ಯೋಗಸ್ಥರ ಕಾರ್ಯಸಾಮರ್ಥ್ಯಕ್ಕೆ ಹೊಸ ಸವಾಲುಗಳು.ಹಿತಶತ್ರುಗಳ ಕುತಂತ್ರ ಗಳಿಗೆ ಸೋಲು. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ.ಯಂತ್ರೋಪಕರಣ ಉದ್ಯಮಿಗಳಿಗೆ ಅನುಕೂಲದ ವಾತಾವರಣ.

ಕುಂಭ: ಪರ್ವಕಾಲ ಆರಂಭವಾಗುತ್ತಿದ್ದಂತೆ ಮುಂದೆ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ. ಶೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ.

ಮೀನ: ನವರಾತ್ರಿಯ ಪರ್ವಕಾಲ ಆರಂಭದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ. ಸಮಾಜ ಸುಧಾರಣಾ ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ.

Advertisement

Udayavani is now on Telegram. Click here to join our channel and stay updated with the latest news.

Next