Advertisement

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

07:22 AM Oct 06, 2024 | Team Udayavani |

ಮೇಷ: ನವರಾತ್ರಿಯ ಶುಭದಿನ ಉದ್ಯೋಗಸ್ಥಾನವನ್ನು ಮರೆತುಬಿಡಿ. ವ್ಯವಹಾರದಲ್ಲಿ ವಿಶೇಷ ಯಶಸ್ಸು. ಸರಕಾರಿ ಉದ್ಯೋಗಸ್ಥರಿಗೆ ವಿರಾಮದ ಹರ್ಷಾನುಭವ. ಮಹಿಳಾ ಉದ್ಯಮಿಗಳಿಗೆ ಯಶಸ್ಸು.

Advertisement

ವೃಷಭ: ಭವಿಷ್ಯದ ಯೋಜನೆಗಳ ಕುರಿತು ಚಿಂತನೆ. ಅನ್ವೇಷಕರೆದುದು ವಿಶಿಷ್ಟ ಅವಕಾಶಗಳ ಅನಾವರಣ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ಪ್ರಮುಖ ವ್ಯಕ್ತಿಯ ಭೇಟಿ.

ಮಿಥುನ: ಕೇಳಿದವರಿಗೆ ಮಾತ್ರ ಸಲಹೆ ನೀಡಿ. ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ. ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ.

ಕರ್ಕಾಟಕ: ಉದ್ಯೋಗಸ್ಥರಿಗೆ ನಾಳೆಯ ಕೆಲಸಗಳ ಚಿಂತೆ ಕಿರಿಯ ಉದ್ಯಮಿಗಳ ಸ್ನೇಹಕೂಟ ಆಯೋಜನೆ. ಹಿರಿಯರಿಗೆ ಸರಕಾರಿ ಸೌಲಭ್ಯಗಳನ್ನು ದೊರಕಿಸುವ ಪ್ರಯತ್ನ. ಮಹಿಳೆಯರ ಸೊÌàದ್ಯೋಗ ಯೋಜನೆ ಉತ್ಪನ್ನಗಳಿಗೆ ಕೀರ್ತಿ.

ಸಿಂಹ: ಉದ್ಯಮಕ್ಕೆ ಹೊಸರೂಪ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿ. ಪರಿಣತರ ಸಲಹೆಯಂತೆ ಹೊಸ ಕ್ರಮಗಳು. ಶಿಕ್ಷಿತ ಕುಶಲಕರ್ಮಿಗಳಿಗೆ ಶೀಘ್ರ ಉದ್ಯೋಗ. ಕುಟುಂಬದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ, ನೆಮ್ಮದಿ.

Advertisement

ಕನ್ಯಾ: ಸರಕಾರಿ ಉದ್ಯೋಗಸ್ಥರಿಗೆ ವಿರಾಮದ ಆನಂದ. ಸಹೋದ್ಯೋಗಿ ಮಿತ್ರರ ಸಂತೋಷಕೂಟ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಕೆಲವರಿಗೆ ರಕ್ತದಾನ ಮಾಡುವ ಅವಕಾಶ.

ತುಲಾ: ಕೆಲವು ಕ್ಷೇತ್ರಗಳವರಿಗೆ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಯಾವುದೇ ಹಾನಿಯಾಗದು. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಾಂಸಾರಿಕ ನೆಮ್ಮದಿ ಕೆಡಿಸುವವರಿಗೆ ಮುಖಭಂಗ.

ಧನು: ಉದ್ಯಮದ ವೈವಿಧಿÂàಕರಣ ಯೋಜನೆ ಅನುಷ್ಠಾನ ಆರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.ಮಕ್ಕಳ ಅಧ್ಯಯನಾಸಕ್ತಿ ಹಾಗೂ ಪ್ರತಿಭೆ ವಿಕಸನಕ್ಕೆ ಪೋ›ತ್ಸಾಹ. ಅಶಕ್ತರ ನೆರವಿನ ಯೋಜನೆಗಳಲ್ಲಿ ಭಾಗಿ.

ಮಕರ: ಮನೆಯವರ ಜೊತೆಯಲ್ಲಿ ವಿರಾಮದ ಆನಂದಾನುಭವ. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ. ಯಂತ್ರೋಪಕರಣ ಉದ್ಯಮಿಗಳಿಗೆ ದೊಡ್ಡ ಮೊತ್ತದ ಲಾಭ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ.

ಕುಂಭ: ವಿರಾಮದಂದು ಮಂದಗತಿಯಲ್ಲಿ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ. ಟೈಲರಿಂಗ್‌, ವೈಂಡಿಂಗ್‌ ಬಲ್ಲವರಿಗೆ ಅಧಿಕ ಆದಾಯ.

ಮೀನ: ವಿರಾಮದ ಕಾರಣ ಮೈಮನಗಳಿಗೆ ಆಲಸ್ಯ. ಸೋದರ ಸೋದರಿಯ ಭೇಟಿ. ಸಾಮೂಹಿಕ ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ.ಅನಾಥಾಶ್ರಮ, ವೃದ್ಧಾಶ್ರಮಕ್ಕೆ ಭೇಟಿ, ನೊಂದವರಿಗೆ ಸಾಂತ್ವನ.

Advertisement

Udayavani is now on Telegram. Click here to join our channel and stay updated with the latest news.

Next